ಮೈಸೂರು ನಗರ

ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಕೆಶಿ ಹೇಳಿಕೆ ಹಾಸ್ಪಾಸ್ಪದ: ಸಂಸದ ಯದುವೀರ್ ಒಡೆಯರ್‌

ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಪಾಸ್ಪದವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿಕೆಶಿ ಹೇಳಿಕೆಯಿಂದ ಹಿಂದೂ‌ ಭಾವನೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ. ಸಾವಿರಾರು ವರ್ಷಗಳ ಹಿಂದೆ ಮಾರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ‌ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು

ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದರು.

ಇನ್ನು ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯಾ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಾಧಿಕಾರ ಸೃಷ್ಠಿಸುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನು ತೆಗೆದುಕೊಳ್ತಿದ್ದಾರೆ. ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ‌ ಹಾಗೆ ಮಾಡಿದ್ರು. ಯಾವಾಗಲೂ ಹಿಂದುಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಹಿಂದೂ ಸ್ಥಳಗಳನ್ನ ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್‌ನಿಂದ ಧಾರ್ಮಿಕ‌ ಭಾವನೆಗೆ ಧಕ್ಕೆ ಉಂಟಾಗಿದೆ.

ಡಿಕೆಶಿ ಅವರು ಆರ್‌ಎಸ್‌ಎಸ್ ಹಾಡು ಹಾಡಿ ಜಾಗೃತಿ ಎಂದಿದ್ದರು. ಅವರ ಬೆಂಬಲಿಗರ ವಿರೋಧಕ್ಕೆ ಗುರಿಯಾಗಿದ್ದರು. ಅದನ್ನ ಸಮತೋಲನಕ್ಕೆ ತರಲು, ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು. ನಾವು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲೂ ನಾವು ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಆಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು. ರಾಜ್ಯದಲ್ಲಿ ‌ಹಲವು ಸಮಸ್ಯೆಗಳಿವೆ. ಅವುಗಳನ್ನು ಮುಚ್ಚಿ‌ ಹಾಕಲು ಇಂತಹ ಹೇಳಿಕೆ ಕೊಡುವುದು ಬೇಡ. ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ‌ ಹಿಂದೆ ಡ್ರಗ್ಸ್ ಪ್ರಕರಣ‌ ಮುಚ್ಚಿ ಹಾಕಲು ಟಿಪ್ಪು ವಿಚಾರ ತಂದ್ರು. ಹಾಗೆಯೇ ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು‌ ಹೇಳಿಕೆ ನೀಡ್ತಾರೆ. ದೇವಾಲಯಗಳನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ. ಪ್ರಥಮವಾಗಿ ಇದೊಂದು‌ ಧಾರ್ಮಿಕ ಸ್ಥಳ. ಬೆಟ್ಟ ಹಿಂದುಗಳ ಆಸ್ತಿ. ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತೆ. ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಏನೂ ಆಗಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago