ಕೆ.ಬಿ.ರಮೇಶ್ ನಾಯಕ
ಮೈಸೂರು: ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ ಬಳಸಬೇಡಿ. ಇದರಿಂದ ತೋಟದ ವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಅನ್ನದಾತರಿಗೆ ಚೆಸ್ಕಾಂ ಮನವಿ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ನಿತ್ಯ ಸಂಜೆ ಆರು ಗಂಟೆಯಿಂದ ಬೆಳಿಗ್ಗೆವರೆಗೆ ನೀರಾವರಿ ಫೀಡರ್ಗಳ ಮೂಲಕ ತೋಟದ ಮನೆಗಳ ಗೃಹ ಬಳಕೆಗೆ ಹಾಗೂ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳಿಗಾಗಿ ಸಿಂಗಲ್ ಫೇಸ್ ವಿದ್ಯುತ್ತನ್ನು ಓಪನ್ ಡೆಲ್ಟ ಮೂಲಕ ನೀಡಲಾಗುತ್ತಿದೆ. ಈ ಸಮಯದಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ಗಳನ್ನು ಬಳಸಬಾರದು ಎಂದು ರೈತರಿಗೆ ಮನವಿ ಮಾಡಲಾಗುತ್ತಿದೆ. ಹೀಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸುವಾಗ ಕೆಲವರು ಕೃಷಿ ಪಂಪ್ಸೆಟ್ಗಳನ್ನು ನೀರಾವರಿ ಫೀಡರ್ ಮೂಲಕ ಬಳಸುತ್ತಿದ್ದು, ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಕಾಡಂಚಿನ ಪ್ರದೇಶಗಳಲ್ಲಿ ವಾಸವಾಗಿರುವ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ ಬಳಸದಂತೆ ಮನವಿ ಮಾಡಲಾಗಿದೆ. ಒಂದು ವೇಳೆ ರಾತ್ರಿ ವೇಳೆಯಲ್ಲಿ ಸಿಂಗಲ್ ಫೇಸ್ನಲ್ಲಿ ಪಂಪ್ಸೆಟ್ಗಳು ಚಾಲನೆ ಮಾಡಿ ಫೀಡರ್ ಟ್ರಿಪ್ ಆಗುವುದರಿಂದ ವಿದ್ಯುತ್ ವ್ಯತ್ಯಯವಾದಲ್ಲಿ ನಿಗಮವು ಜವಾಬ್ದಾರಿಯಾಗಿರುವುದಿಲ್ಲ. ಆದ್ದರಿಂದ ರಾತ್ರಿ ವೇಳೆಯಲ್ಲಿ ಸಿಂಗಲ್ ಫೇಸ್ನಲ್ಲಿ ಪಂಪ್ಸೆಟ್ಗಳನ್ನು ಚಾಲನೆಗೊಳಿಸಬಾರದು ಎಂದು ರೈತರಿಗೆ ಮನವಿ ಮಾಡಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…