ರಾತ್ರಿ ವೇಳೆ ಸಿಂಗಲ್‌ ಫೇಸ್‌ ಕೃಷಿ ಪಂಪ್‌ಸೆಟ್‌ ಬಳಸಬೇಡಿ: ರೈತರಿಗೆ ಚೆಸ್ಕಾಂ ಮನವಿ

ಕೆ.ಬಿ.ರಮೇಶ್ ನಾಯಕ 

ಮೈಸೂರು: ರಾತ್ರಿ ವೇಳೆ ಸಿಂಗಲ್‌ ಫೇಸ್‌ ಕೃಷಿ ಪಂಪ್‌ಸೆಟ್‌ ಬಳಸಬೇಡಿ. ಇದರಿಂದ ತೋಟದ ವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಅನ್ನದಾತರಿಗೆ ಚೆಸ್ಕಾಂ ಮನವಿ ಮಾಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮವು ನಿತ್ಯ ಸಂಜೆ ಆರು ಗಂಟೆಯಿಂದ ಬೆಳಿಗ್ಗೆವರೆಗೆ ನೀರಾವರಿ ಫೀಡರ್‌ಗಳ ಮೂಲಕ ತೋಟದ ಮನೆಗಳ ಗೃಹ ಬಳಕೆಗೆ ಹಾಗೂ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳಿಗಾಗಿ ಸಿಂಗಲ್‌ ಫೇಸ್‌ ವಿದ್ಯುತ್ತನ್ನು ಓಪನ್‌ ಡೆಲ್ಟ ಮೂಲಕ ನೀಡಲಾಗುತ್ತಿದೆ. ಈ ಸಮಯದಲ್ಲಿ ಸಿಂಗಲ್‌ ಫೇಸ್‌ ಕೃಷಿ ಪಂಪ್‌ಸೆಟ್‌ಗಳನ್ನು ಬಳಸಬಾರದು ಎಂದು ರೈತರಿಗೆ ಮನವಿ ಮಾಡಲಾಗುತ್ತಿದೆ. ಹೀಗೆ ಸಿಂಗಲ್‌ ಫೇಸ್‌ ವಿದ್ಯುತ್‌ ಪೂರೈಸುವಾಗ ಕೆಲವರು ಕೃಷಿ ಪಂಪ್‌ಸೆಟ್‌ಗಳನ್ನು ನೀರಾವರಿ ಫೀಡರ್‌ ಮೂಲಕ ಬಳಸುತ್ತಿದ್ದು, ಇದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಕಾಡಂಚಿನ ಪ್ರದೇಶಗಳಲ್ಲಿ ವಾಸವಾಗಿರುವ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ ಸಿಂಗಲ್‌ ಫೇಸ್‌ ಕೃಷಿ ಪಂಪ್‌ಸೆಟ್ ಬಳಸದಂತೆ ಮನವಿ ಮಾಡಲಾಗಿದೆ. ಒಂದು ವೇಳೆ ರಾತ್ರಿ ವೇಳೆಯಲ್ಲಿ ಸಿಂಗಲ್‌ ಫೇಸ್‌ನಲ್ಲಿ ಪಂಪ್‌ಸೆಟ್‌ಗಳು ಚಾಲನೆ ಮಾಡಿ ಫೀಡರ್‌ ಟ್ರಿಪ್‌ ಆಗುವುದರಿಂದ ವಿದ್ಯುತ್‌ ವ್ಯತ್ಯಯವಾದಲ್ಲಿ ನಿಗಮವು ಜವಾಬ್ದಾರಿಯಾಗಿರುವುದಿಲ್ಲ. ಆದ್ದರಿಂದ ರಾತ್ರಿ ವೇಳೆಯಲ್ಲಿ ಸಿಂಗಲ್‌ ಫೇಸ್‌ನಲ್ಲಿ ಪಂಪ್‌ಸೆಟ್‌ಗಳನ್ನು ಚಾಲನೆಗೊಳಿಸಬಾರದು ಎಂದು ರೈತರಿಗೆ ಮನವಿ ಮಾಡಿದೆ.

 

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

9 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago