dussehra inauguration
ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ. ಶುಕ್ರವಾರ ವಾಹನಗಳ ಮೂಲಕ ಬೆಟ್ಟಕ್ಕೆ ಬಂದವರ ಸಂಖ್ಯೆ 80 ಸಾವಿರ ಜನ. ಕಾಲ್ನಡಿಗೆ ಮೂಲಕ ಬಂದವರ ಸಂಖ್ಯೆ 50 ರಿಂದ 60 ಸಾವಿರ ಜನ. ಒಟ್ಟಾರೆ 1 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಬೆಟ್ಟಕ್ಕೆ ಬಂದ ಮಾಹಿತಿ ಲಭ್ಯವಿದೆ. ಜನ ಹೆಚ್ಚಾಗಿ ಬಂದ ಕಾರಣ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ. ಆದ್ರೆ ಜಿಲ್ಲಾಡಳಿತ ಬಹುತೇಕ ಚನ್ನಾಗಿ ಕೆಲಸ ನಿರ್ವಹಿಸಿದ್ದಾರೆ. ಬೆಟ್ಟದ ಮೆಟ್ಟಿಲೇರಿ ಬಂದವರಿಗೆ ಅನುಕೂಲ ಇದೆ ಎಂದು ತಿಳಿದು, ಅತೀ ಉತ್ಸಾಹದಿಂದ ನಿರೀಕ್ಷೆ ಮೀರಿ ಹೆಚ್ಚು ಜನ ಬಂದಿದ್ದಾರೆ. ಈ ರೀತಿ ಜನ ಬಂದ ಕಾರಣ 3 ರೀತಿಯಲ್ಲಿ ವ್ಯವಸ್ಥೆ ಮಾಡಿದ್ದರಿಂದ ಜನದಟ್ಟಣೆ ಜಾಸ್ತಿ ಆಗಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…