ಮೈಸೂರು ನಗರ

ಮೊದಲ ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಬಂದ ಭಕ್ತರೆಷ್ಟು ಗೊತ್ತಾ?: ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಿಷ್ಟು

ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ. ಶುಕ್ರವಾರ ವಾಹನಗಳ ಮೂಲಕ ಬೆಟ್ಟಕ್ಕೆ ಬಂದವರ ಸಂಖ್ಯೆ 80 ಸಾವಿರ ಜನ. ಕಾಲ್ನಡಿಗೆ ಮೂಲಕ ಬಂದವರ ಸಂಖ್ಯೆ 50 ರಿಂದ 60 ಸಾವಿರ ಜನ. ಒಟ್ಟಾರೆ 1 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಬೆಟ್ಟಕ್ಕೆ ಬಂದ ಮಾಹಿತಿ ಲಭ್ಯವಿದೆ. ಜನ ಹೆಚ್ಚಾಗಿ ಬಂದ ಕಾರಣ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ. ಆದ್ರೆ ಜಿಲ್ಲಾಡಳಿತ ಬಹುತೇಕ ಚನ್ನಾಗಿ ಕೆಲಸ ನಿರ್ವಹಿಸಿದ್ದಾರೆ. ಬೆಟ್ಟದ ಮೆಟ್ಟಿಲೇರಿ ಬಂದವರಿಗೆ ಅನುಕೂಲ ಇದೆ ಎಂದು ತಿಳಿದು, ಅತೀ ಉತ್ಸಾಹದಿಂದ ನಿರೀಕ್ಷೆ ಮೀರಿ ಹೆಚ್ಚು ಜನ ಬಂದಿದ್ದಾರೆ. ಈ ರೀತಿ ಜನ ಬಂದ ಕಾರಣ 3 ರೀತಿಯಲ್ಲಿ ವ್ಯವಸ್ಥೆ ಮಾಡಿದ್ದರಿಂದ ಜನದಟ್ಟಣೆ ಜಾಸ್ತಿ ಆಗಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಆಂದೋಲನ ಡೆಸ್ಕ್

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

45 seconds ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago