dussehra inauguration
ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ. ಶುಕ್ರವಾರ ವಾಹನಗಳ ಮೂಲಕ ಬೆಟ್ಟಕ್ಕೆ ಬಂದವರ ಸಂಖ್ಯೆ 80 ಸಾವಿರ ಜನ. ಕಾಲ್ನಡಿಗೆ ಮೂಲಕ ಬಂದವರ ಸಂಖ್ಯೆ 50 ರಿಂದ 60 ಸಾವಿರ ಜನ. ಒಟ್ಟಾರೆ 1 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಬೆಟ್ಟಕ್ಕೆ ಬಂದ ಮಾಹಿತಿ ಲಭ್ಯವಿದೆ. ಜನ ಹೆಚ್ಚಾಗಿ ಬಂದ ಕಾರಣ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ. ಆದ್ರೆ ಜಿಲ್ಲಾಡಳಿತ ಬಹುತೇಕ ಚನ್ನಾಗಿ ಕೆಲಸ ನಿರ್ವಹಿಸಿದ್ದಾರೆ. ಬೆಟ್ಟದ ಮೆಟ್ಟಿಲೇರಿ ಬಂದವರಿಗೆ ಅನುಕೂಲ ಇದೆ ಎಂದು ತಿಳಿದು, ಅತೀ ಉತ್ಸಾಹದಿಂದ ನಿರೀಕ್ಷೆ ಮೀರಿ ಹೆಚ್ಚು ಜನ ಬಂದಿದ್ದಾರೆ. ಈ ರೀತಿ ಜನ ಬಂದ ಕಾರಣ 3 ರೀತಿಯಲ್ಲಿ ವ್ಯವಸ್ಥೆ ಮಾಡಿದ್ದರಿಂದ ಜನದಟ್ಟಣೆ ಜಾಸ್ತಿ ಆಗಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…