ಮೈಸೂರು ನಗರ

ಲಯನ್ಸ್‌ ಕ್ಲಬ್‌ ಆಫ್‌ ಮೈಸೂರು ವತಿಯಿಂದ ಡಾಕ್ಟರ್‌ ಡೇ ಸೆಲೆಬ್ರೇಷನ್‌ ಕಾರ್ಯಕ್ರಮ ಆಯೋಜನೆ

ಮೈಸೂರು: ಲಯನ್ಸ್‌ ಕ್ಲಬ್‌ ಆಫ್‌ ಮೈಸೂರು ಜಯಲಕ್ಷ್ಮೀಪುರಂ ಇವರ ವತಿಯಿಂದ ಡಾಕ್ಟರ್‌ ಡೇ ಸೆಲೆಬ್ರೇಷನ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರಿನ ಬೋಗಾದಿಯ ಎರಡನೇ ಹಂತದಲ್ಲಿರುವ ದ ಕಬಾನ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಖ್ಯಾತ ವೈದ್ಯರಾದ ಡಾ.ಎಸ್.ರವಿಶಂಕರ್‌ ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಬಳಿಕ ಡಾ.ರವಿಶಂಕರ್‌ ಅವರಿಗೆ ಪೇಟ, ಶಾಲು ಹಾಗೂ ಹಾರ ಹಾಕಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ರವಿಶಂಕರ್‌ ಅವರು, ಲಯನ್ಸ್‌ ಕ್ಲಬ್‌ ಜಯಲಕ್ಷ್ಮೀಪುರಂಗೆ ಧನ್ಯವಾದ ತಿಳಿಸಿದರು. ಡಾಕ್ಟರ್‌ ಎಕ್ಸ್‌ಟ್ರಾಡೀನರಿ ಅವಾರ್ಡ್‌ ಪಡೆದಿದ್ದು ತುಂಬಾ ಸಂತೋಷವಾಗಿದೆ. ಇದಕ್ಕೆಲ್ಲಾ ಲಯನ್ಸ್‌ ಕ್ಲಬ್‌ ಜಯಲಕ್ಷ್ಮೀಪುರಂ ಕಾರಣ ಎಂದು ಸಂತಸ ವ್ಯಕ್ತಪಡಿಸಿದರು. ಭಾಷಣದುದ್ದಕ್ಕೂ ಲಯನ್ಸ್‌ ಕ್ಲಬ್‌ನ ಸಾಧನೆಯನ್ನು ಹಾಡಿ ಹೊಗಳಿದ ಅವರು, ಈ ಪ್ರಶಸ್ತಿ ಬರಲು ಏನೆಲ್ಲಾ ಶ್ರಮ ಪಟ್ಟರು ಎಂಬುದನ್ನು ನೆರೆದಿದ್ದ ಜನರಿಗೆ ವಿವರಿಸಿದರು. ಈ ಪ್ರಶಸ್ತಿಯನ್ನು ನಾನು ನನ್ನ ಬಳಿ ಚಿಕಿತ್ಸೆ ಪಡೆದ ಜನರು, ನನ್ನ ಸಿಬ್ಬಂದಿ ವರ್ಗ ಸೇರಿದಂತೆ ಎಲ್ಲರಿಗೂ ಡೆಡಿಕೇಟ್‌ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಲಯನ್‌ ದಿನೇಶ್‌, ಲಯನ್ ಮೋಹನ್‌ ಕುಮಾರ್‌, ಲಯನ್‌ ನಂದ ಕುಮಾರ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

2 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

2 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

4 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago