ಮೈಸೂರು: ಲಯನ್ಸ್ ಕ್ಲಬ್ ಆಫ್ ಮೈಸೂರು ಜಯಲಕ್ಷ್ಮೀಪುರಂ ಇವರ ವತಿಯಿಂದ ಡಾಕ್ಟರ್ ಡೇ ಸೆಲೆಬ್ರೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಬೋಗಾದಿಯ ಎರಡನೇ ಹಂತದಲ್ಲಿರುವ ದ ಕಬಾನ ಗಾರ್ಡನ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಖ್ಯಾತ ವೈದ್ಯರಾದ ಡಾ.ಎಸ್.ರವಿಶಂಕರ್ ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಬಳಿಕ ಡಾ.ರವಿಶಂಕರ್ ಅವರಿಗೆ ಪೇಟ, ಶಾಲು ಹಾಗೂ ಹಾರ ಹಾಕಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ರವಿಶಂಕರ್ ಅವರು, ಲಯನ್ಸ್ ಕ್ಲಬ್ ಜಯಲಕ್ಷ್ಮೀಪುರಂಗೆ ಧನ್ಯವಾದ ತಿಳಿಸಿದರು. ಡಾಕ್ಟರ್ ಎಕ್ಸ್ಟ್ರಾಡೀನರಿ ಅವಾರ್ಡ್ ಪಡೆದಿದ್ದು ತುಂಬಾ ಸಂತೋಷವಾಗಿದೆ. ಇದಕ್ಕೆಲ್ಲಾ ಲಯನ್ಸ್ ಕ್ಲಬ್ ಜಯಲಕ್ಷ್ಮೀಪುರಂ ಕಾರಣ ಎಂದು ಸಂತಸ ವ್ಯಕ್ತಪಡಿಸಿದರು. ಭಾಷಣದುದ್ದಕ್ಕೂ ಲಯನ್ಸ್ ಕ್ಲಬ್ನ ಸಾಧನೆಯನ್ನು ಹಾಡಿ ಹೊಗಳಿದ ಅವರು, ಈ ಪ್ರಶಸ್ತಿ ಬರಲು ಏನೆಲ್ಲಾ ಶ್ರಮ ಪಟ್ಟರು ಎಂಬುದನ್ನು ನೆರೆದಿದ್ದ ಜನರಿಗೆ ವಿವರಿಸಿದರು. ಈ ಪ್ರಶಸ್ತಿಯನ್ನು ನಾನು ನನ್ನ ಬಳಿ ಚಿಕಿತ್ಸೆ ಪಡೆದ ಜನರು, ನನ್ನ ಸಿಬ್ಬಂದಿ ವರ್ಗ ಸೇರಿದಂತೆ ಎಲ್ಲರಿಗೂ ಡೆಡಿಕೇಟ್ ಮಾಡುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಲಯನ್ ದಿನೇಶ್, ಲಯನ್ ಮೋಹನ್ ಕುಮಾರ್, ಲಯನ್ ನಂದ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…