ಮೈಸೂರು ನಗರ

ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ: ನಾಳೆ ಸಂಜೆಯೊಳಗೆ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದ ಎಂ.ಜಿ.ಮಹೇಶ್‌

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ನಾಳೆ ಸಂಜೆಯೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ. ಸಿದ್ದರಾಮಯ್ಯ ಸುತ್ತಮುತ್ತ ಇರುವ ಡೋಂಗಿಗಳನ್ನು ಮೆಚ್ಚಿಸುವ ಸಲುವಾಗಿ ದಸರಾ ಉದ್ಘಾಟನೆ ಮಾಡಲು ಬಾನು‌ ಮುಷ್ತಾಕ್‌ರನ್ನು ಆಯ್ಕೆ ಮಾಡಿದ್ದೀರಾ? ಇಡೀ ದಸರಾ ಧಾರ್ಮಿಕ ಪರಂಪರೆಗೆ ಅನುಸಾರವಾಗಿ ನಡೆಯುತ್ತದೆ. ನಮಗೆ ಬಾನು ಮುಷ್ತಾಕ್ ಮೇಲೆ ದ್ವೇಷವಿಲ್ಲ. ಆದರೆ ಬಾನು ಮುಷ್ತಾಕ್ ಅರಿಶಿನ ಕುಂಕುಮದ ಬಣ್ಣವನ್ನು ಟೀಕೆ ಮಾಡಿದ್ದಾರೆ. ಅಲ್ಲದೇ ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಈ ವಿಚಾರದಲ್ಲಿ ಅಗತ್ಯ ಬಿದ್ದರೆ ಹೋರಾಟ, ಬಲಿದಾನಕ್ಕೂ ಸಿದ್ದರಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

12 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago