ಮೈಸೂರು ನಗರ

ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ: ನಾಳೆ ಸಂಜೆಯೊಳಗೆ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದ ಎಂ.ಜಿ.ಮಹೇಶ್‌

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ನಾಳೆ ಸಂಜೆಯೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ. ಸಿದ್ದರಾಮಯ್ಯ ಸುತ್ತಮುತ್ತ ಇರುವ ಡೋಂಗಿಗಳನ್ನು ಮೆಚ್ಚಿಸುವ ಸಲುವಾಗಿ ದಸರಾ ಉದ್ಘಾಟನೆ ಮಾಡಲು ಬಾನು‌ ಮುಷ್ತಾಕ್‌ರನ್ನು ಆಯ್ಕೆ ಮಾಡಿದ್ದೀರಾ? ಇಡೀ ದಸರಾ ಧಾರ್ಮಿಕ ಪರಂಪರೆಗೆ ಅನುಸಾರವಾಗಿ ನಡೆಯುತ್ತದೆ. ನಮಗೆ ಬಾನು ಮುಷ್ತಾಕ್ ಮೇಲೆ ದ್ವೇಷವಿಲ್ಲ. ಆದರೆ ಬಾನು ಮುಷ್ತಾಕ್ ಅರಿಶಿನ ಕುಂಕುಮದ ಬಣ್ಣವನ್ನು ಟೀಕೆ ಮಾಡಿದ್ದಾರೆ. ಅಲ್ಲದೇ ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಈ ವಿಚಾರದಲ್ಲಿ ಅಗತ್ಯ ಬಿದ್ದರೆ ಹೋರಾಟ, ಬಲಿದಾನಕ್ಕೂ ಸಿದ್ದರಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

8 mins ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

52 mins ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

1 hour ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

2 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

3 hours ago

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಸಿದ್ದರಾಮಯ್ಯ ಬಾಂಬ್‌

ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್‌ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದ್ದಾರೆ ಎಂದು…

3 hours ago