ಮೈಸೂರು: ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ರೈತನ ಮೃತದೇಹವನ್ನು ಯಾಕೆ ಮೈಸೂರಿಗೆ ತಂದರು ಎಂದು ನನಗೆ ಗೊತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಸಿಲುಕಿ ರೈತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ಮೃತದೇಹವನ್ನು ಮೈಸೂರಿಗೆ ತಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.
ಇದನ್ನು ಓದಿ: ಹುಲಿ ದಾಳಿಗೆ ರೈತ ಬಲಿ ಪ್ರಕರಣ: ಸಚಿವ ಈಶ್ವರ್ ಖಂಡ್ರೆಗೆ ರೈತರ ಘೇರಾವ್
ರೈತನ ಮೃತ ದೇಹವನ್ನು ಯಾಕೆ ಮೈಸೂರಿಗೆ ತಂದರು ಎಂಬುದು ನನಗೆ ಗೊತ್ತಿಲ್ಲ. ನಾನು ಅಂತಿಮ ದರ್ಶನ ಪಡೆಯಲು ಮೈಸೂರಿಗೆ ತಂದಿದ್ದಾರೆ ಎಂಬುದು ಸುಳ್ಳು. ನಾನು ಈ ಬಗ್ಗೆ ಅಧಿಕಾರಿಗಳ ಬಳಿ ವಿವರಣೆ ಕೇಳುತ್ತೇನೆ ಎಂದು ಮಾಧ್ಯಮದವರ ಪ್ರಶ್ನೆಗೆ ತಡವರಿಸಿಕೊಂಡು ಉತ್ತರಿಸಿದರು.
ಇನ್ನು ಪರಿಸ್ಥಿತಿಗಳ ಆಧಾರದ ಮೇಲೆ ನಿನ್ನೆ ನಾನು ಘಟನಾ ಸ್ಥಳಕ್ಕೆ ಹೋಗಲಿಲ್ಲ. ನಮ್ಮ ಶಾಸಕರು ಎಲ್ಲರೂ ಅಲ್ಲಿಗೆ ತೆರಳಿ ಸಾಂತ್ವನ ಹೇಳಿದ್ದಾರೆ. ಹುಲಿ ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಬೋನ್ ಇಡುವಲ್ಲಿ ನಿರ್ಲಕ್ಷ್ಯ ಯಾಕೆ ವಹಿಸಿದರು ಎಂಬ ಬಗ್ಗೆ ವಿವರಣೆ ಕೇಳುತ್ತೇನೆ. ಅಧಿಕಾರಿಗಳ ನಿರ್ಲಕ್ಷ್ಯ ಇದ್ದರೇ ಅವರನ್ನು ಕೂಡಲೇ ಅಮಾನತ್ತು ಮಾಡುತ್ತೇನೆ. ಇಂದು ಸಂಜೆ ಹಿರಿಯ ಅಧಿಕಾರಿಗಳ ಸಭೆ ಕರೆಯುತ್ತಿದ್ದೇನೆ. ಸಭೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…