ಮೈಸೂರು ನಗರ

ರೈತನ ಮೃತ ದೇಹವನ್ನು ಯಾಕೆ ಮೈಸೂರಿಗೆ ತಂದರು ಎಂಬುದು ಗೊತ್ತಿಲ್ಲ: ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ರೈತನ ಮೃತದೇಹವನ್ನು ಯಾಕೆ ಮೈಸೂರಿಗೆ ತಂದರು ಎಂದು ನನಗೆ ಗೊತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಸಿಲುಕಿ ರೈತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ಮೃತದೇಹವನ್ನು ಮೈಸೂರಿಗೆ ತಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ಇದನ್ನು ಓದಿ: ಹುಲಿ ದಾಳಿಗೆ ರೈತ ಬಲಿ ಪ್ರಕರಣ: ಸಚಿವ ಈಶ್ವರ್‌ ಖಂಡ್ರೆಗೆ ರೈತರ ಘೇರಾವ್‌

ರೈತನ ಮೃತ ದೇಹವನ್ನು ಯಾಕೆ ಮೈಸೂರಿಗೆ ತಂದರು ಎಂಬುದು ನನಗೆ ಗೊತ್ತಿಲ್ಲ. ನಾನು ಅಂತಿಮ ದರ್ಶನ ಪಡೆಯಲು ಮೈಸೂರಿಗೆ ತಂದಿದ್ದಾರೆ ಎಂಬುದು ಸುಳ್ಳು. ನಾನು ಈ ಬಗ್ಗೆ ಅಧಿಕಾರಿಗಳ ಬಳಿ ವಿವರಣೆ ಕೇಳುತ್ತೇನೆ ಎಂದು ಮಾಧ್ಯಮದವರ ಪ್ರಶ್ನೆಗೆ ತಡವರಿಸಿಕೊಂಡು ಉತ್ತರಿಸಿದರು.

ಇನ್ನು ಪರಿಸ್ಥಿತಿಗಳ ಆಧಾರದ ಮೇಲೆ ನಿನ್ನೆ ನಾನು ಘಟನಾ ಸ್ಥಳಕ್ಕೆ ಹೋಗಲಿಲ್ಲ. ನಮ್ಮ ಶಾಸಕರು ಎಲ್ಲರೂ ಅಲ್ಲಿಗೆ ತೆರಳಿ ಸಾಂತ್ವನ ಹೇಳಿದ್ದಾರೆ. ಹುಲಿ ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಬೋನ್ ಇಡುವಲ್ಲಿ ನಿರ್ಲಕ್ಷ್ಯ ಯಾಕೆ ವಹಿಸಿದರು ಎಂಬ ಬಗ್ಗೆ ವಿವರಣೆ ಕೇಳುತ್ತೇನೆ. ಅಧಿಕಾರಿಗಳ ನಿರ್ಲಕ್ಷ್ಯ ಇದ್ದರೇ ಅವರನ್ನು ಕೂಡಲೇ ಅಮಾನತ್ತು ಮಾಡುತ್ತೇನೆ. ಇಂದು ಸಂಜೆ ಹಿರಿಯ ಅಧಿಕಾರಿಗಳ ಸಭೆ ಕರೆಯುತ್ತಿದ್ದೇನೆ. ಸಭೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

3 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

11 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

11 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

16 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

16 hours ago