ಮೈಸೂರು: ಈ ಬಾರಿ ವಿಜೃಂಭಣೆಯಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಅನುಮತಿ ಕೊಡಿ, ಯಾವುದೇ ಅನವಶ್ಯಕ ನಿರ್ಬಂಧ ಹೇರಬೇಡಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಮನವಿ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಆಚರಣೆಗೆ ಅನವಶ್ಯಕ ನಿರ್ಬಂಧ ಹೇರಬಾರದು. ನಮ್ಮ ಹಬ್ಬ ನಮ್ಮ ನಂಬಿಕೆ. ಹಾಗಾಗಿ ಹಬ್ಬ ಆಚರಣೆಗೆ ಯಾವುದೇ ನಿರ್ಬಂಧ ಹಾಕಬಾರದು. ಎಲ್ಲದಕ್ಕೂ ಅನುಮತಿ ಪಡೆಯಬೇಕು ಎಂಬ ಕಟ್ಟಾಜ್ಞೆ ಬೇಡ. ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ತೆಗೆದುಕೊಳ್ಳಬಾರದು. ಅದಕ್ಕೆ ಅನುಮತಿ ಪಡೆದು ಹಬ್ಬ ಆಚರಿಸಿ. ಪೊಲೀಸರು ಯಾವುದಾದರೂ ಸಮಸ್ಯೆ ಒಡ್ಡಿದರೆ ಜನರ ಪರವಾಗಿ ನಾನೇ ನಿಲ್ಲುತ್ತೇನೆ. ಬೇರೆಯವರಿಗಿಲ್ಲದ ನಿರ್ಬಂಧ ನಮಗೇಕೆ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗೌರಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ವಿಧಿಸಿರುವ ನಿರ್ಬಂಧಗಳನ್ನು ತೆರವು ಮಾಡುವಂತೆ ಆಗ್ರಹಿಸಿ ಸಂಜೆ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…