ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ, ಈ ಯೋಜನೆಯಡಿ ಆಸ್ಪತ್ರೆಗೆ ೨೦೦ ಕ್ಕೂ ಹೆಚ್ಚು ಹೆಚ್ಚುವರಿ ಹಾಸಿಗೆಗಳನ್ನು ಒದಗಿಸಿರುವುದಕ್ಕೆ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಬಿ. ದಿನೇಶ್ ಧನ್ಯವಾದ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಮೈಸೂರಿನ ಶ್ರೀಜಯದೇವ ಆಸ್ಪತ್ರೆಗೆ ಅನುದಾನ ಪ್ರಕಟಿಸಿದ ಹಿನ್ನೆಲೆಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮೈಸೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳ ರೋಗಿಗಳು ಮಾತ್ರವಲ್ಲದೆ ಕೇರಳ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿರುವುದರಿಂದ ವೈದ್ಯರ ಮೇಲೆ ಹೆಚ್ಚಿನ ಒತ್ತಡ ಉಂಟಾಗಿತ್ತು. ಪ್ರತಿದಿನ ಸುಮಾರು ೮೦೦ ರಿಂದ ೧೦೦೦ ಹೊರರೋಗಿಗಳು ತಪಾಸಣೆಗೆ ಬರುತ್ತಿದ್ದಾರೆ. ಈ ಹಿನ್ನೆಲೆ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಿದರೆ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆಯಾಗುವುದರ ಜೊತೆಗೆ ಮುಂದಿನ ೧೦ ರಿಂದ ೧೫ ವರ್ಷಗಳವರೆಗೆ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.
ಈ ಯೋಜನೆಯಿಂದ ಹೆಚ್ಚುವರಿ ವೈದ್ಯರ ನೇಮಕ, ಮೂಲಸೌಕರ್ಯ ಅಭಿವೃದ್ಧಿ, ಶಸ್ತ್ರಚಿಕಿತ್ಸೆಗಳ ಹೆಚ್ಚಳ ಮತ್ತು ರೋಗಿಗಳ ಕಾಯುವಿಕೆ ಸಮಯ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ರೋಗಿಗಳ ಒತ್ತಡದಿಂದ ಶಸ್ತ್ರ ಚಿಕಿತ್ಸೆಗೆ ಅವಶ್ಯಕತೆ ಇರುವವರು ಸರದಿಗಾಗಿ ತಿಂಗಳುಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಚಿಕಿತ್ಸೆಗೆಂದು ಆಗಮಿಸುವ ರೋಗಿಗಳ ಸಂಖ್ಯೆಗೆ ಹೋಲಿಸಿದರೆ ವೈದ್ಯರ ಪ್ರಮಾಣ ಸಾಲದು. ಆದರೆ ಈಗ ರಾಜ್ಯ ಸರಕಾರ ಬಜೆಟ್ ನಲ್ಲಿ ಅನುದಾನ ಘೋಷಿಸಿರುವ ಕಾರಣ, ಹೆಚ್ಚುವರಿ ವೈದ್ಯರನ್ನು ನೇಮಕ ಮಾಡಿಕೊಳ್ಳಬಹುದು. ಜತೆಗೆ ಅಪರೇಷನ್ ಗಳ ಸಂಖ್ಯೆಯನ್ನು ಹೆಚ್ಚಿಸಬಹುದು. ಇದರಿಂದ ರೋಗಿಗಳ ಕಾಯುವಿಕೆಯ ಪ್ರಮಾಣ ಕಡಿಮೆಯಾಗಲಿದೆ ಎಂದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…