ಮೈಸೂರು ನಗರ

ಬಿ-ಖಾತಾ ಅಭಿಯಾನಕ್ಕೆ ಚಾಲನೆ ನೀಡಿದ ಡಾ.ಹೆಚ್‌.ಸಿ.ಮಹದೇವಪ್ಪ

ಮೈಸೂರು: ಜಿಲ್ಲೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಇಂದು (ಮಾ.1) ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಲ್ಲದೇ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ ಎಂದು ಹೇಳಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ತನ್ವೀರ್‌ ಸೇಠ್‌, ಕೆ. ಹರೀಶ್‌ ಗೌಡ, ಶ್ರೀವತ್ಸ, ವಿಧಾನ ಪರಿಷತ್‌ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್‌.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್‌ ಖಾನ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

2 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

4 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

4 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

4 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

4 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

6 hours ago