ಮೈಸೂರು ನಗರ

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರಿನ ಅಶೋಕಪುರಂ, ಕಡಕೊಳ, ನಂಜನಗೂಡು ಹಾಗೂ ಚಾಮರಾಜನಗರ ರೈಲು ನಿಲ್ದಾಣಗಳಲ್ಲಿ ಪರಿಶೀಲಿಸಿದ ಅವರು, ಪ್ರಗತಿಯಲ್ಲಿರುವ ರೈಲ್ವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

ಚಾಮರಾಜನಗರದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಿ, ಪ್ರಯಾಣಿಕರ ಸೌಲಭ್ಯಗಳು, ಮೂಲಸೌಕರ್ಯದ ಸುಧಾರಣೆಗಳು ಮತ್ತು ನಿಲ್ದಾಣ ಪುನರ್ ವಿಕಾಸಕ್ಕೆ ವಿಶೇಷ ಗಮನ ಹರಿಸುವಂತೆ ಹೇಳಿದರು. ಈ ವೇಳೆ ನಿಲ್ದಾಣದಲ್ಲಿನ ಉದ್ಯೋಗಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.

ಇದನ್ನು ಓದಿ: ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ 

ನಂಜನಗೂಡಿನಲ್ಲಿ ರೈಲ್ವೆ ಗೂಡ್ಸ್ ಶೆಡ್‌ನ ಕಾರ್ಯಾಚರಣೆ, ದಕ್ಷತೆ ಹಾಗೂ ಭವಿಷ್ಯದ ಸಾಮರ್ಥ್ಯ ವೃದ್ಧಿ ಅಗತ್ಯಗಳನ್ನು ಅವಲೋಕಿಸಿದರು. ನಂತರ ಕಡಕೊಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಕಂಟೇನರ್ ಲೋಡಿಂಗ್ ಪಾಯಿಂಟ್ ಕಾರ್ಯಕ್ಷಮತೆ, ಸರಕು ಹಸ್ತಾಂತರ ಸೌಲಭ್ಯಗಳು ಹಾಗೂ ಸರಕು ಸಾಗಣೆ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದು, ಅಗತ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣಕ್ಕೆ ಆಗಮಿಸಿ, ಪ್ರಯಾಣಿಕರ ಸೌಲಭ್ಯಗಳು, ಸುರಕ್ಷತಾ ಕ್ರಮಗಳು ಹಾಗೂ ನಿಲ್ದಾಣದ ನಿರ್ವಹಣೆ ಪರಿಶೀಲಿಸಿದರು. ಈ ವೇಳೆ ಗತಿ ಶಕ್ತಿ ಸಿಪಿಎಂ ಆನಂದ್ ಭಾರತಿ ಸೇರಿದಂತೆ ವಿವಿಧ ವಿಭಾಗದ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

39 mins ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

1 hour ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

4 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

4 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

4 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

5 hours ago