ಮೈಸೂರು ನಗರ

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರಿನ ಅಶೋಕಪುರಂ, ಕಡಕೊಳ, ನಂಜನಗೂಡು ಹಾಗೂ ಚಾಮರಾಜನಗರ ರೈಲು ನಿಲ್ದಾಣಗಳಲ್ಲಿ ಪರಿಶೀಲಿಸಿದ ಅವರು, ಪ್ರಗತಿಯಲ್ಲಿರುವ ರೈಲ್ವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

ಚಾಮರಾಜನಗರದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಿ, ಪ್ರಯಾಣಿಕರ ಸೌಲಭ್ಯಗಳು, ಮೂಲಸೌಕರ್ಯದ ಸುಧಾರಣೆಗಳು ಮತ್ತು ನಿಲ್ದಾಣ ಪುನರ್ ವಿಕಾಸಕ್ಕೆ ವಿಶೇಷ ಗಮನ ಹರಿಸುವಂತೆ ಹೇಳಿದರು. ಈ ವೇಳೆ ನಿಲ್ದಾಣದಲ್ಲಿನ ಉದ್ಯೋಗಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.

ಇದನ್ನು ಓದಿ: ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ 

ನಂಜನಗೂಡಿನಲ್ಲಿ ರೈಲ್ವೆ ಗೂಡ್ಸ್ ಶೆಡ್‌ನ ಕಾರ್ಯಾಚರಣೆ, ದಕ್ಷತೆ ಹಾಗೂ ಭವಿಷ್ಯದ ಸಾಮರ್ಥ್ಯ ವೃದ್ಧಿ ಅಗತ್ಯಗಳನ್ನು ಅವಲೋಕಿಸಿದರು. ನಂತರ ಕಡಕೊಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಕಂಟೇನರ್ ಲೋಡಿಂಗ್ ಪಾಯಿಂಟ್ ಕಾರ್ಯಕ್ಷಮತೆ, ಸರಕು ಹಸ್ತಾಂತರ ಸೌಲಭ್ಯಗಳು ಹಾಗೂ ಸರಕು ಸಾಗಣೆ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದು, ಅಗತ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣಕ್ಕೆ ಆಗಮಿಸಿ, ಪ್ರಯಾಣಿಕರ ಸೌಲಭ್ಯಗಳು, ಸುರಕ್ಷತಾ ಕ್ರಮಗಳು ಹಾಗೂ ನಿಲ್ದಾಣದ ನಿರ್ವಹಣೆ ಪರಿಶೀಲಿಸಿದರು. ಈ ವೇಳೆ ಗತಿ ಶಕ್ತಿ ಸಿಪಿಎಂ ಆನಂದ್ ಭಾರತಿ ಸೇರಿದಂತೆ ವಿವಿಧ ವಿಭಾಗದ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago