ಮೈಸೂರು ನಗರ

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ ವ್ಯಕ್ತಪಡಿಸಿದೆ. ಈ ಹಿನ್ನಲೆ ಡ್ರಗ್ಸ್‌ ಮುಕ್ತ ನಗರಕ್ಕೆ ಪಣ ತೊಟ್ಟಿರುವ ಮೈಸೂರು ಪೊಲೀಸರು ನಗರದ ವಿವಿಧೆಡೆ ದೀಢಿರ್‌ ದಾಳಿ ನಡೆಸುತ್ತಿದ್ದಾರೆ. ಎಂದಿನಂತೆ ಬುಧವಾರ ಸಹ ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಲಾಗಿದೆ.

ಉದಯಗಿರಿ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್‌ ಬಕ್ಸ್‌ ಕೆಫೆ ಬಳಿ ಅಮೀರ್‌ ಖಾನ್‌, ಸೈಯದ್‌ ಇಮ್ರಾನ್‌, ಮಹಮ್ಮದ್‌ ನಬೀಲ್‌ ಎಂಬಾತನನ್ನು ಬಂಧಿಸಿ ಸುಮಾರು 1.20 ಲಕ್ಷ ರೂ. ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೂರು ಆರೋಪಿಗಳ ಪೈಕಿ ಆರೋಪಿ ಅಮೀರ್ ಖಾನ್ ಈತನ ವಿರುದ್ಧ ಈ ಹಿಂದೆ ಕೂಡ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ. ಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಡಿನ್ನರ್‌ ಪಾರ್ಟಿ

ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…

47 mins ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…

1 hour ago

ಏಪ್ರಿಲ್.‌9ರಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…

2 hours ago

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

3 hours ago

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

3 hours ago

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…

3 hours ago