ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ ವ್ಯಕ್ತಪಡಿಸಿದೆ. ಈ ಹಿನ್ನಲೆ ಡ್ರಗ್ಸ್ ಮುಕ್ತ ನಗರಕ್ಕೆ ಪಣ ತೊಟ್ಟಿರುವ ಮೈಸೂರು ಪೊಲೀಸರು ನಗರದ ವಿವಿಧೆಡೆ ದೀಢಿರ್ ದಾಳಿ ನಡೆಸುತ್ತಿದ್ದಾರೆ. ಎಂದಿನಂತೆ ಬುಧವಾರ ಸಹ ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಲಾಗಿದೆ.
ಉದಯಗಿರಿ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಬಳಿ ಅಮೀರ್ ಖಾನ್, ಸೈಯದ್ ಇಮ್ರಾನ್, ಮಹಮ್ಮದ್ ನಬೀಲ್ ಎಂಬಾತನನ್ನು ಬಂಧಿಸಿ ಸುಮಾರು 1.20 ಲಕ್ಷ ರೂ. ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೂರು ಆರೋಪಿಗಳ ಪೈಕಿ ಆರೋಪಿ ಅಮೀರ್ ಖಾನ್ ಈತನ ವಿರುದ್ಧ ಈ ಹಿಂದೆ ಕೂಡ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ. ಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…