ಮೈಸೂರು ನಗರ

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಡ್ರಗ್ಸ್ ತಯಾರಿಸುವ ಲ್ಯಾಬ್‌ನಲ್ಲಿ ಒಟ್ಟು 10 ಕೋಟಿ ರೂ.ಮೌಲ್ಯದ ಡ್ರಗ್ಸ್ ಪತ್ತೆ ಮಾಡಲಾಗಿದೆ. ಈ ಹಿಂದೆ ನಗರದಲ್ಲಿ ಡ್ರಗ್ಸ್ ಕಾರ್ಖಾನೆ ಪತ್ತೆಯಾಗಿತ್ತು. ಹೀಗಿದ್ದರೂ ಪೊಲೀಸರು ಎಚ್ಚೆತ್ತುಕೊಂಡು ನಗರದ ವಿವಿಧೆಡೆ ಶೋಧನೆ ನಡೆಸಿ ಡ್ರಗ್ಸ್ ಪತ್ತೆ ಹಚ್ಚುವ ಕಾರ್ಯ ಮಾಡಿಲ್ಲ. ಈ ವಿಚಾರದಲ್ಲಿ ಮೈಸೂರು ಪೊಲೀಸರು ಮತ್ತೊಮ್ಮೆ ವಿಫಲ ಆಗಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಹೆಬ್ಬಾಳದಲ್ಲಿ ಎನ್‌ಸಿಬಿ ದಾಳಿ ನಡೆಸಿ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆದರೆ, ಗೃಹ ಸಚಿವರು, ಪೊಲೀಸ್ ಅಯುಕ್ತರು ಏನು ಸಿಕ್ಕಿಲ್ಲ ಅಂತ ಹೇಳಿಕೆ ನೀಡಿದ್ದಾರೆ. 10 ಕೋಟಿ ರೂ.ಮೌಲ್ಯದ ಡ್ರಗ್ಸ್ ಪತ್ತೆಯಾಗಿರುವ ಕುರಿತು ಎನ್‌ಸಿಬಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಎನ್ ಸಿಬಿ ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ಇಲ್ಲದಿದ್ದರೆ ಮೈಸೂರಿನಲ್ಲಿ ತಯಾರಾಗುತ್ತಿದ್ದ ಡ್ರಗ್ಸ್ ಬಗ್ಗೆ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದರು.

ಪೊಲೀಸರು ಶಾಮೀಲು?

ದೆಹಲಿ ಪೊಲೀಸರು, ಮಹಾರಾಷ್ಟ್ರ ಪೊಲೀಸರು ಮೈಸೂರಿಗೆ ಬಂದು ಡ್ರಗ್ಸ್ ವಶಕ್ಕೆ ಪಡೆಯುತ್ತಿದ್ದಾರೆ. ಅದರೆ, ಮೈಸೂರಿನ ಪೊಲೀ ಸರಿಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ನಮ್ಮ ಪೊಲೀಸರು ಏನು ಮಾಡುತ್ತಿದ್ದಾರೆ ಅನ್ನೋ ಅನುಮಾನ ಮೂಡಿದೆ. ಡ್ರಗ್ಸ್ ವಿಚಾರದಲ್ಲಿ ಮೈಸೂರಿನ ಹೆಸರು ಪದೇ ಪದೇ ಕೇಳಿ ಬರುತ್ತಿದ್ದರೂ ಪೊಲೀಸರು ಮಾಹಿತಿ ಇಲ್ಲ ಅಂದರೆ ಏನು ಅರ್ಥ ಪೊಲೀಸರು ಕೂಡ ಶಾಮೀಲಾಗಿದ್ದಾರಾ ಅನ್ನೋ ಅನುಮಾನ ಮೂಡಿದೆ ಎಂದರು.

ವಿಶೇಷ ತಂಡ ರಚಿಸಬೇಕು

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ಇದಕೋಸ್ಕರ ಒಂದು ವಿಶೇಷ ತಂಡ ರಚನೆ ಮಾಡಬೇಕಾಗಿತ್ತು. ಆದರೆ, ಸರ್ಕಾರ ಈ ಬಗ್ಗೆ ಆಸಕ್ತಿ ತೋರಲಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಡ್ರಗ್ಸ್ ತಯಾರಿಕೆ, ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದೆ. ಮೈಸೂರಿನಲ್ಲಿ ನಡೆಯುತ್ತಿರುವ ಡ್ರಗ್ಸ್ ತಯಾರಿಕೆಯ ಕುರಿತು ಕೇಂದ್ರ ಗೃಹ ಸಚಿವರ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago