ಮೈಸೂರು ನಗರ

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌ ಪ್ರಕರಣದಲ್ಲಿ ಅಷ್ಟೇ ಎಂದು ಗೃಹ ಸಚಿವ ಡಾ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಿನಾಯಿಲ್ ತಯಾರು ಮಾಡುವ ಫ್ಯಾಕ್ಟರಿ ಅದು. ಡ್ರಗ್ಸ್ ಸಂಬಂಧಪಟ್ಟ ಯಾವ ಮೆಟಿರಿಯಲ್ಸ್ ಇಲ್ಲಿ ಸಿಕ್ಕಿಲ್ಲ. ಅಲ್ಲಿ ಸಿಕ್ಕ ಆರೋಪಿಗಳ ಸಂಬಂಧಿಕರು ಇಲ್ಲಿದ್ದಾರೆ‌. ಹೀಗಾಗಿ ವಿಚಾರಣೆ ಮಾಡಿದ್ದಾರೆ. ಇಲ್ಲಿ ಯಾರನ್ನು ಸಹ ವಶಕ್ಕೆ ಪಡೆದಿಲ್ಲ ಎಂದು ಹೇಳಿದರು.

ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ಕೊಡಲು ಮುಂದಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಬೇರೆ ಬೇರೆ ಕಾರಣಕ್ಕೆ ಕೆಲವು ಸ್ನೇಹಿತರು ಇದನ್ನ ಹಬ್ಬಿಸಿದ್ದಾರೆ. ಅಂತಹ ಘಟನೆ ನಡೆದಿಲ್ಲ. ಸ್ನೇಹಿತರು ಬಹಳಷ್ಟು ಜನ ಇದ್ದಾರೆ, ಓಲ್ಡ್ ಮತ್ತು ನ್ಯೂ ಫ್ರೆಂಡ್ಸ್ ಎಲ್ಲರೂ ಈ ರೀತಿ ಹಬ್ಬಿಸಿದ್ದಾರೆ. ಇಂತಹ ಘಟನೆ ಯಾವುದು ನಡೆದಿಲ್ಲ. ಈ ಬಗ್ಗೆ ಜಾರ್ಜ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಇದೆಲ್ಲಾ ಊಹಾಪೋಹಾ ಅಷ್ಟೇ ಎಂದರು.

ಪಾಕಿಸ್ತಾನ ಜಿಂದಾಬಾದ್ ಕೂಗಿದ ಪ್ರಕರಣಗಳು ಬಾಕಿ ವಿಚಾರ‌, ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದ್ದಾರೆ. ಕೋರ್ಟ್ ನಲ್ಲಿ ಕೇಸ್ ಗಳು ನಡೆಯುತ್ತಿದೆ. ಹೀಗೆ ವಿಚಾರಣೆ ಮಾಡಿ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಬೆಳಗಾವಿ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಇನ್ನೂ ಹೆಚ್ಚಿನ ಮಾಹಿತಿ ಎಸ್ಐಟಿ ವರದಿ ಬಂದ ನಂತರ ಗೊತ್ತಾಗಲಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

1 min ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago