Mysore
23
overcast clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಮೈಸೂರು| ಸಚಿವ ಎಚ್‌ಸಿಎಂಗೆ ಖಡಕ್‌ ಎಚ್ಚರಿಕೆ ಕೊಟ್ಟ ದಲಿತ ಹೋರಾಟಗಾರರು

ಮೈಸೂರು: ಏಪ್ರಿಲ್.‌14ರ ಒಳಗೆ ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್‌ ಜಯಂತಿಯಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪಗೆ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ನಿನ್ನೆ ಸಚಿವ ಎಚ್.ಸಿ.ಮಹದೇವಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ರಸ್ತೆ ಮಧ್ಯದಲ್ಲೇ ತಡೆದು ಬಂಧಿಸಿದರು. ಈ ಘಟನೆಯಿಂದ ರೊಚ್ಚಿಗೆದ್ದಿರುವ ದಸಂಸ ಕಾರ್ಯಕರ್ತರು, ಸಚಿವ ಮಹದೇವಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ತಡೆದು ಬಂಧಿಸುವಂತೆ ಮಾಡಿದ್ದು, ಸಚಿವ ಮಹದೇವಪ್ಪ ರಾಜಕೀಯ ಜೀವನದ ಕಪ್ಪುಚುಕ್ಕೆ. ಎಪ್ರಿಲ್.14ರ ಒಳಗೆ ಅಂಬೇಡ್ಕರ್ ಭವನ ಕಾಮಗಾರಿ ಪುನರಾರಂಭಿಸಬೇಕು. ಇಲ್ಲವಾದಲ್ಲಿ ಸಚಿವರಿಗೆ ಅಂಬೇಡ್ಕರ್‌ ಜಯಂತಿಯಂದು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ. ನಿಮ್ಮ ದಲಿತ ವಿರೋಧಿತನವನ್ನು ಕರಪತ್ರ ಮಾಡಿ ಹಂಚುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!