ಮೈಸೂರು: ಏಪ್ರಿಲ್.14ರ ಒಳಗೆ ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್ ಜಯಂತಿಯಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪಗೆ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ನಿನ್ನೆ ಸಚಿವ ಎಚ್.ಸಿ.ಮಹದೇವಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ರಸ್ತೆ ಮಧ್ಯದಲ್ಲೇ ತಡೆದು ಬಂಧಿಸಿದರು. ಈ ಘಟನೆಯಿಂದ ರೊಚ್ಚಿಗೆದ್ದಿರುವ ದಸಂಸ ಕಾರ್ಯಕರ್ತರು, ಸಚಿವ ಮಹದೇವಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ತಡೆದು ಬಂಧಿಸುವಂತೆ ಮಾಡಿದ್ದು, ಸಚಿವ ಮಹದೇವಪ್ಪ ರಾಜಕೀಯ ಜೀವನದ ಕಪ್ಪುಚುಕ್ಕೆ. ಎಪ್ರಿಲ್.14ರ ಒಳಗೆ ಅಂಬೇಡ್ಕರ್ ಭವನ ಕಾಮಗಾರಿ ಪುನರಾರಂಭಿಸಬೇಕು. ಇಲ್ಲವಾದಲ್ಲಿ ಸಚಿವರಿಗೆ ಅಂಬೇಡ್ಕರ್ ಜಯಂತಿಯಂದು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ. ನಿಮ್ಮ ದಲಿತ ವಿರೋಧಿತನವನ್ನು ಕರಪತ್ರ ಮಾಡಿ ಹಂಚುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ…
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ…
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ…
ಟೆಹ್ರಾನ್: ಇರಾನ್ನ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು…
ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ…