ಮೈಸೂರು ನಗರ

ಮೈಸೂರು| ಸಚಿವ ಎಚ್‌ಸಿಎಂಗೆ ಖಡಕ್‌ ಎಚ್ಚರಿಕೆ ಕೊಟ್ಟ ದಲಿತ ಹೋರಾಟಗಾರರು

ಮೈಸೂರು: ಏಪ್ರಿಲ್.‌14ರ ಒಳಗೆ ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್‌ ಜಯಂತಿಯಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪಗೆ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ನಿನ್ನೆ ಸಚಿವ ಎಚ್.ಸಿ.ಮಹದೇವಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ರಸ್ತೆ ಮಧ್ಯದಲ್ಲೇ ತಡೆದು ಬಂಧಿಸಿದರು. ಈ ಘಟನೆಯಿಂದ ರೊಚ್ಚಿಗೆದ್ದಿರುವ ದಸಂಸ ಕಾರ್ಯಕರ್ತರು, ಸಚಿವ ಮಹದೇವಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ತಡೆದು ಬಂಧಿಸುವಂತೆ ಮಾಡಿದ್ದು, ಸಚಿವ ಮಹದೇವಪ್ಪ ರಾಜಕೀಯ ಜೀವನದ ಕಪ್ಪುಚುಕ್ಕೆ. ಎಪ್ರಿಲ್.14ರ ಒಳಗೆ ಅಂಬೇಡ್ಕರ್ ಭವನ ಕಾಮಗಾರಿ ಪುನರಾರಂಭಿಸಬೇಕು. ಇಲ್ಲವಾದಲ್ಲಿ ಸಚಿವರಿಗೆ ಅಂಬೇಡ್ಕರ್‌ ಜಯಂತಿಯಂದು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ. ನಿಮ್ಮ ದಲಿತ ವಿರೋಧಿತನವನ್ನು ಕರಪತ್ರ ಮಾಡಿ ಹಂಚುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago