ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್ ಡೆಕ್ಕರ್ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು. ಪ್ರವಾಸೋದ್ಯಮ ಇಲಾಖೆಯೂ ಪ್ರವಾಸಿಗರ ಗಮನವನ್ನು ಸೆಳೆಯುವ ಉದ್ದೇಶವಾಗಿ ಈ ವಿಶೇಷ ಬಸ್ ಸೇವೆಯನ್ನು ಒದಗಿಸುತ್ತಿದ್ದು, ಡಬಲ್ ಡೆಕ್ಕರ್ ಬಸ್ನಲ್ಲಿ ಪ್ರಯಾಣಿಸುವ ಮೂಲಕ ನಗರದ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು.
ಈ ಅಂಬಾರಿ ಬಸ್ನಲ್ಲಿ ಪ್ರಯಾಣಿಸಲು ದರ ನಿಗದಿ ಪಡಿಸಲಾಗಿದ್ದು, ಹಪ್ಪರ್ ಡೆಕ್ನಲ್ಲಿ ಪ್ರಯಾಣಿಸಲು 500 ರೂ., ಲೋವರ್ ಡೆಕ್ನಲ್ಲಿ ಪ್ರಯಾಣಿಸಲು 250 ರೂ.ಗಳನ್ನು ನಿಗಧಿಪಡಿಸಿದೆ. ಅಂಬಾರಿ ಬಸ್ನ ಪ್ರಯಾಣದ ಅವಧಿ 1 ಗಂಟೆಯಾಗಿದ್ದು, ಸಂಜೆ 6, ರಾತ್ರಿ 8 ಹಾಗೂ 9.30 ರವರೆಗೆ ಈ ಬಸ್ಗಳು ಸಂಚರಿಸಲಿವೆ.
ಅಂಬಾರಿ ಡೆಕ್ಕರ್ ಬಸ್ ಸಂಚರಿಸುವ ಮಾರ್ಗ
ಹೋಟೆಲ್ ಮಯೂರ ಹೊಯ್ಸಳದಿಂದ ಬಸ್ಗಳು ಹೊರಡಲಿದ್ದು, ಹಳೇ ಡಿಸಿ ಕಚೇರಿ, ಕ್ರಾಫರ್ಡ್ ಹಾಲ್, ರಾಮಸ್ವಾಮಿ ವೃತ್ತ, ಸಂಸ್ಕೃತ ಪಾಠಶಾಲಾ, ಅರಮನೆ ದಕ್ಷಿಣ ದ್ವಾರ, ಜಯಮಾರ್ತಂಡ ಸರ್ಕಲ್ ಗೇಟ್, ಹಾರ್ಡಿಂಗ್ ಸರ್ಕಲ್, ಕೆಆರ್ ವೃತ್ತ, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ವೈಧ್ಯಕೀಯ ಕಾಲೇಜು ಹಾಗೂ ರೈಲ್ವೆ ನಿಲ್ದಾಣದ ಮೂಲಕ ಹೊಯ್ಸಳ ಹೋಟೆಲ್ಗೆ ಬಂದು ತಲುಪಲಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…