ಮೈಸೂರು ನಗರ

ಮೈಸೂರು ದಸರಾ: ಅಂಬಾರಿ ಡಬಲ್‌ ಡೆಕ್ಕರ್‌ ಬಸ್‌ನ ದರ, ಮಾರ್ಗದ ವಿವರ ಹೀಗಿದೆ…

ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್‌ ಡೆಕ್ಕರ್‌ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು.  ಪ್ರವಾಸೋದ್ಯಮ ಇಲಾಖೆಯೂ ಪ್ರವಾಸಿಗರ ಗಮನವನ್ನು ಸೆಳೆಯುವ ಉದ್ದೇಶವಾಗಿ ಈ ವಿಶೇಷ ಬಸ್‌ ಸೇವೆಯನ್ನು ಒದಗಿಸುತ್ತಿದ್ದು, ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ನಗರದ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು.

ಈ ಅಂಬಾರಿ ಬಸ್‌ನಲ್ಲಿ ಪ್ರಯಾಣಿಸಲು ದರ ನಿಗದಿ ಪಡಿಸಲಾಗಿದ್ದು, ಹಪ್ಪರ್‌ ಡೆಕ್‌ನಲ್ಲಿ ಪ್ರಯಾಣಿಸಲು 500 ರೂ., ಲೋವರ್‌ ಡೆಕ್‌ನಲ್ಲಿ ಪ್ರಯಾಣಿಸಲು 250 ರೂ.ಗಳನ್ನು ನಿಗಧಿಪಡಿಸಿದೆ. ಅಂಬಾರಿ ಬಸ್‌ನ ಪ್ರಯಾಣದ ಅವಧಿ 1 ಗಂಟೆಯಾಗಿದ್ದು, ಸಂಜೆ 6, ರಾತ್ರಿ 8 ಹಾಗೂ 9.30 ರವರೆಗೆ ಈ ಬಸ್‌ಗಳು ಸಂಚರಿಸಲಿವೆ.

ಅಂಬಾರಿ ಡೆಕ್ಕರ್‌ ಬಸ್‌ ಸಂಚರಿಸುವ ಮಾರ್ಗ

ಹೋಟೆಲ್‌ ಮಯೂರ ಹೊಯ್ಸಳದಿಂದ ಬಸ್‌ಗಳು ಹೊರಡಲಿದ್ದು, ಹಳೇ ಡಿಸಿ ಕಚೇರಿ, ಕ್ರಾಫರ್ಡ್‌  ಹಾಲ್‌, ರಾಮಸ್ವಾಮಿ ವೃತ್ತ, ಸಂಸ್ಕೃತ ಪಾಠಶಾಲಾ, ಅರಮನೆ ದಕ್ಷಿಣ ದ್ವಾರ, ಜಯಮಾರ್ತಂಡ ಸರ್ಕಲ್‌ ಗೇಟ್‌, ಹಾರ್ಡಿಂಗ್‌ ಸರ್ಕಲ್‌, ಕೆಆರ್‌ ವೃತ್ತ, ಸಯ್ಯಾಜಿ ರಾವ್‌ ರಸ್ತೆ, ಆಯುರ್ವೇದ ವೈಧ್ಯಕೀಯ ಕಾಲೇಜು ಹಾಗೂ ರೈಲ್ವೆ ನಿಲ್ದಾಣದ ಮೂಲಕ ಹೊಯ್ಸಳ ಹೋಟೆಲ್‌ಗೆ ಬಂದು ತಲುಪಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

6 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

7 hours ago