ಮೈಸೂರು ನಗರ

ಮೈಸೂರು ದಸರಾ: ಅಂಬಾರಿ ಡಬಲ್‌ ಡೆಕ್ಕರ್‌ ಬಸ್‌ನ ದರ, ಮಾರ್ಗದ ವಿವರ ಹೀಗಿದೆ…

ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್‌ ಡೆಕ್ಕರ್‌ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು.  ಪ್ರವಾಸೋದ್ಯಮ ಇಲಾಖೆಯೂ ಪ್ರವಾಸಿಗರ ಗಮನವನ್ನು ಸೆಳೆಯುವ ಉದ್ದೇಶವಾಗಿ ಈ ವಿಶೇಷ ಬಸ್‌ ಸೇವೆಯನ್ನು ಒದಗಿಸುತ್ತಿದ್ದು, ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ನಗರದ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು.

ಈ ಅಂಬಾರಿ ಬಸ್‌ನಲ್ಲಿ ಪ್ರಯಾಣಿಸಲು ದರ ನಿಗದಿ ಪಡಿಸಲಾಗಿದ್ದು, ಹಪ್ಪರ್‌ ಡೆಕ್‌ನಲ್ಲಿ ಪ್ರಯಾಣಿಸಲು 500 ರೂ., ಲೋವರ್‌ ಡೆಕ್‌ನಲ್ಲಿ ಪ್ರಯಾಣಿಸಲು 250 ರೂ.ಗಳನ್ನು ನಿಗಧಿಪಡಿಸಿದೆ. ಅಂಬಾರಿ ಬಸ್‌ನ ಪ್ರಯಾಣದ ಅವಧಿ 1 ಗಂಟೆಯಾಗಿದ್ದು, ಸಂಜೆ 6, ರಾತ್ರಿ 8 ಹಾಗೂ 9.30 ರವರೆಗೆ ಈ ಬಸ್‌ಗಳು ಸಂಚರಿಸಲಿವೆ.

ಅಂಬಾರಿ ಡೆಕ್ಕರ್‌ ಬಸ್‌ ಸಂಚರಿಸುವ ಮಾರ್ಗ

ಹೋಟೆಲ್‌ ಮಯೂರ ಹೊಯ್ಸಳದಿಂದ ಬಸ್‌ಗಳು ಹೊರಡಲಿದ್ದು, ಹಳೇ ಡಿಸಿ ಕಚೇರಿ, ಕ್ರಾಫರ್ಡ್‌  ಹಾಲ್‌, ರಾಮಸ್ವಾಮಿ ವೃತ್ತ, ಸಂಸ್ಕೃತ ಪಾಠಶಾಲಾ, ಅರಮನೆ ದಕ್ಷಿಣ ದ್ವಾರ, ಜಯಮಾರ್ತಂಡ ಸರ್ಕಲ್‌ ಗೇಟ್‌, ಹಾರ್ಡಿಂಗ್‌ ಸರ್ಕಲ್‌, ಕೆಆರ್‌ ವೃತ್ತ, ಸಯ್ಯಾಜಿ ರಾವ್‌ ರಸ್ತೆ, ಆಯುರ್ವೇದ ವೈಧ್ಯಕೀಯ ಕಾಲೇಜು ಹಾಗೂ ರೈಲ್ವೆ ನಿಲ್ದಾಣದ ಮೂಲಕ ಹೊಯ್ಸಳ ಹೋಟೆಲ್‌ಗೆ ಬಂದು ತಲುಪಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

2 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

2 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

2 hours ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

2 hours ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

2 hours ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

7 hours ago