ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್ ಆನೆ
ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ ಸುಮಾರಿಗೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಹರಿದಾಡಿದೆ.
ಕಂಜನ್ ಹಾಗೂ ಧನಂಜಯ ನಡುವೆ ಗುದ್ದಾಟ ನಡೆದಿದ್ದು, ಈ ವೇಳೆ ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದಾನೆ. ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯ ಸೆರೆಯಾಗಿದೆ.
ಓಡಿಹೋದ ಕಂಜನ್ನನ್ನು ನಿಯಂತ್ರಿಸಿಲು ಧನಂಜಯ ಹಿಂದಿನಿಂದ ಓಡಿತು. ಈ ವೇಳೆ ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು.
ದೊಡ್ಡಕೆರೆ ಮೈದಾನದ ರಸ್ತೆಗೆ ಬಂದಿದ್ದ ಕಂಜನ್, ವಾಹನಗಳನ್ನು ನೋಡಿ ಬೆದರಿ ನಿಂತಿದ್ದಾನೆ. ಮಾವುತರು ಕಾವಾಡಿಗರು ಸಮಾಧಾನ ಪಡಿಸಿ, ಆನೆಗಳ ಆಟೋಟಕ್ಕೆ ಬ್ರೇಕ್ ಹಾಕಿದ್ದಾರೆ. ಸದ್ಯ ಎರಡು ಆನೆಗಳು ಅರಮನೆ ಆವರಣ ಸೇರಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…