ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್ ಆನೆ
ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ ಸುಮಾರಿಗೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಹರಿದಾಡಿದೆ.
ಕಂಜನ್ ಹಾಗೂ ಧನಂಜಯ ನಡುವೆ ಗುದ್ದಾಟ ನಡೆದಿದ್ದು, ಈ ವೇಳೆ ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದಾನೆ. ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯ ಸೆರೆಯಾಗಿದೆ.
ಓಡಿಹೋದ ಕಂಜನ್ನನ್ನು ನಿಯಂತ್ರಿಸಿಲು ಧನಂಜಯ ಹಿಂದಿನಿಂದ ಓಡಿತು. ಈ ವೇಳೆ ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು.
ದೊಡ್ಡಕೆರೆ ಮೈದಾನದ ರಸ್ತೆಗೆ ಬಂದಿದ್ದ ಕಂಜನ್, ವಾಹನಗಳನ್ನು ನೋಡಿ ಬೆದರಿ ನಿಂತಿದ್ದಾನೆ. ಮಾವುತರು ಕಾವಾಡಿಗರು ಸಮಾಧಾನ ಪಡಿಸಿ, ಆನೆಗಳ ಆಟೋಟಕ್ಕೆ ಬ್ರೇಕ್ ಹಾಕಿದ್ದಾರೆ. ಸದ್ಯ ಎರಡು ಆನೆಗಳು ಅರಮನೆ ಆವರಣ ಸೇರಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…