ಮೈಸೂರು ನಗರ

ರೊಚ್ಚಿಗೆದ್ದ ದಸರಾ ಆನೆ ಕಂಜನ್:‌ ಧಿಕ್ಕಾಪಾಲಾಗಿ ಓಡಿದ ಜನ

ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್‌ ಆನೆ

ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್‌ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್‌ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ ಸುಮಾರಿಗೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಹರಿದಾಡಿದೆ.

ಕಂಜನ್‌ ಹಾಗೂ ಧನಂಜಯ ನಡುವೆ ಗುದ್ದಾಟ ನಡೆದಿದ್ದು, ಈ ವೇಳೆ ಕಂಜನ್‌ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದಾನೆ. ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯ ಸೆರೆಯಾಗಿದೆ.

ಓಡಿಹೋದ ಕಂಜನ್‌ನನ್ನು ನಿಯಂತ್ರಿಸಿಲು ಧನಂಜಯ ಹಿಂದಿನಿಂದ ಓಡಿತು. ಈ ವೇಳೆ ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು.

ದೊಡ್ಡಕೆರೆ ಮೈದಾನದ ರಸ್ತೆಗೆ ಬಂದಿದ್ದ ಕಂಜನ್‌, ವಾಹನಗಳನ್ನು ನೋಡಿ ಬೆದರಿ ನಿಂತಿದ್ದಾನೆ. ಮಾವುತರು ಕಾವಾಡಿಗರು ಸಮಾಧಾನ ಪಡಿಸಿ, ಆನೆಗಳ ಆಟೋಟಕ್ಕೆ ಬ್ರೇಕ್‌ ಹಾಕಿದ್ದಾರೆ. ಸದ್ಯ ಎರಡು ಆನೆಗಳು ಅರಮನೆ ಆವರಣ ಸೇರಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

3 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

12 mins ago

ಮೈಸೂರು | ಮನುಸ್ಮೃತಿ ಸುಟ್ಟು ಸಮಾನತೆ ಜ್ಯೋತಿ ಬೆಳಗಿಸಿದ ದಸಂಸ

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…

19 mins ago

ಮರ್ಯಾದೆ ಹತ್ಯೆಗೆ ಮನುಸ್ಮೃತಿ ನಿಯಮಗಳೇ ಕಾರಣ : ಚಿಂತಕ ಶಿವಸುಂದರ್‌ ಪ್ರತಿಪಾದನೆ

ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…

38 mins ago

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…

48 mins ago

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

2 hours ago