ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್ ಆನೆ
ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ ಸುಮಾರಿಗೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಹರಿದಾಡಿದೆ.
ಕಂಜನ್ ಹಾಗೂ ಧನಂಜಯ ನಡುವೆ ಗುದ್ದಾಟ ನಡೆದಿದ್ದು, ಈ ವೇಳೆ ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದಾನೆ. ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯ ಸೆರೆಯಾಗಿದೆ.
ಓಡಿಹೋದ ಕಂಜನ್ನನ್ನು ನಿಯಂತ್ರಿಸಿಲು ಧನಂಜಯ ಹಿಂದಿನಿಂದ ಓಡಿತು. ಈ ವೇಳೆ ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು.
ದೊಡ್ಡಕೆರೆ ಮೈದಾನದ ರಸ್ತೆಗೆ ಬಂದಿದ್ದ ಕಂಜನ್, ವಾಹನಗಳನ್ನು ನೋಡಿ ಬೆದರಿ ನಿಂತಿದ್ದಾನೆ. ಮಾವುತರು ಕಾವಾಡಿಗರು ಸಮಾಧಾನ ಪಡಿಸಿ, ಆನೆಗಳ ಆಟೋಟಕ್ಕೆ ಬ್ರೇಕ್ ಹಾಕಿದ್ದಾರೆ. ಸದ್ಯ ಎರಡು ಆನೆಗಳು ಅರಮನೆ ಆವರಣ ಸೇರಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…