ಮೈಸೂರು ನಗರ

ರೊಚ್ಚಿಗೆದ್ದ ದಸರಾ ಆನೆ ಕಂಜನ್:‌ ಧಿಕ್ಕಾಪಾಲಾಗಿ ಓಡಿದ ಜನ

ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್‌ ಆನೆ

ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್‌ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್‌ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ ಸುಮಾರಿಗೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಹರಿದಾಡಿದೆ.

ಕಂಜನ್‌ ಹಾಗೂ ಧನಂಜಯ ನಡುವೆ ಗುದ್ದಾಟ ನಡೆದಿದ್ದು, ಈ ವೇಳೆ ಕಂಜನ್‌ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದಾನೆ. ಅವನನ್ನು ಹಿಡಿದು ತರಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯ ಸೆರೆಯಾಗಿದೆ.

ಓಡಿಹೋದ ಕಂಜನ್‌ನನ್ನು ನಿಯಂತ್ರಿಸಿಲು ಧನಂಜಯ ಹಿಂದಿನಿಂದ ಓಡಿತು. ಈ ವೇಳೆ ಜನರು ಆನೆ ಓಡಿಬರುವುದನ್ನು ನೋಡಿ ದಿಕ್ಕಾಪಾಲಾಗಿ ಓಡಿದರು.

ದೊಡ್ಡಕೆರೆ ಮೈದಾನದ ರಸ್ತೆಗೆ ಬಂದಿದ್ದ ಕಂಜನ್‌, ವಾಹನಗಳನ್ನು ನೋಡಿ ಬೆದರಿ ನಿಂತಿದ್ದಾನೆ. ಮಾವುತರು ಕಾವಾಡಿಗರು ಸಮಾಧಾನ ಪಡಿಸಿ, ಆನೆಗಳ ಆಟೋಟಕ್ಕೆ ಬ್ರೇಕ್‌ ಹಾಕಿದ್ದಾರೆ. ಸದ್ಯ ಎರಡು ಆನೆಗಳು ಅರಮನೆ ಆವರಣ ಸೇರಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago