ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು.
ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು.
ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಮಹೇಂದ್ರ, ಪ್ರಶಾಂತ, ಭೀಮ, ಧನಂಜಯ ಕದಲದೆ ಧೈರ್ಯ ತೋರಿದರೆ, ಪಕ್ಕದಲ್ಲಿದ್ದ ಕುಮ್ಕಿ ಆನೆ ಇನ್ನಿತರ ಕಿರಿಯ ಆನೆಗಳು ಆವುಗಳನು ತಾಗಿನಿಂತು ಧೈರ್ಯ ತಂದುಕೊಂಡವು.
ಕಿರಿಯ ಆನೆ ರೋಹಿತ್ ಹಿಂದೆ ತಿರುಗಿ ನಿಂತಿದ್ದ, ಡೊಡ್ಡ ಹರವೆ ಲಕ್ಷ್ಮಿ ಸ್ವಲ್ಪ ಬೆಚ್ಚಿದಳು. ಇನ್ನೂ ಕಂಜನ್, ಪ್ರಶಾಂತ, ಸುಗ್ರೀವ, ಹಾಗೂ ಹಿರಣ್ಯ ಆನೆ ಭೀಮನು ಧೈರ್ಯ ತುಂಬಿದ.
ಅಭ್ಯಾಸದ ಹಿನ್ನೆಲೆ…
ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು.
ಮೈಸೂರು ದಸರಾ ಆಕರ್ಷಣೆಯಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು. ಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…