ಮೈಸೂರು ನಗರ

ದಸರಾ ಆನೆಗಳಿಗೆ ತಾಲೀಮು: ಧೈರ್ಯ ಪ್ರದರ್ಶಿಸಿದ ಗಜಪಡೆ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು.

ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು.

ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಮಹೇಂದ್ರ, ಪ್ರಶಾಂತ, ಭೀಮ, ಧನಂಜಯ ಕದಲದೆ ಧೈರ್ಯ ತೋರಿದರೆ, ಪಕ್ಕದಲ್ಲಿದ್ದ ಕುಮ್ಕಿ ಆನೆ ಇನ್ನಿತರ ಕಿರಿಯ ಆನೆಗಳು ಆವುಗಳನು ತಾಗಿನಿಂತು ಧೈರ್ಯ ತಂದುಕೊಂಡವು.

ಕಿರಿಯ ಆನೆ ರೋಹಿತ್‌ ಹಿಂದೆ ತಿರುಗಿ ನಿಂತಿದ್ದ, ಡೊಡ್ಡ ಹರವೆ ಲಕ್ಷ್ಮಿ ಸ್ವಲ್ಪ ಬೆಚ್ಚಿದಳು. ಇನ್ನೂ ಕಂಜನ್‌, ಪ್ರಶಾಂತ, ಸುಗ್ರೀವ, ಹಾಗೂ ಹಿರಣ್ಯ ಆನೆ ಭೀಮನು ಧೈರ್ಯ ತುಂಬಿದ.

ಅಭ್ಯಾಸದ ಹಿನ್ನೆಲೆ…
ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು.

ಮೈಸೂರು ದಸರಾ ಆಕರ್ಷಣೆಯಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು. ಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

4 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago