ಮೈಸೂರು ನಗರ

ದಸರಾ ಆನೆಗಳಿಗೆ ತಾಲೀಮು: ಧೈರ್ಯ ಪ್ರದರ್ಶಿಸಿದ ಗಜಪಡೆ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು.

ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು.

ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಮಹೇಂದ್ರ, ಪ್ರಶಾಂತ, ಭೀಮ, ಧನಂಜಯ ಕದಲದೆ ಧೈರ್ಯ ತೋರಿದರೆ, ಪಕ್ಕದಲ್ಲಿದ್ದ ಕುಮ್ಕಿ ಆನೆ ಇನ್ನಿತರ ಕಿರಿಯ ಆನೆಗಳು ಆವುಗಳನು ತಾಗಿನಿಂತು ಧೈರ್ಯ ತಂದುಕೊಂಡವು.

ಕಿರಿಯ ಆನೆ ರೋಹಿತ್‌ ಹಿಂದೆ ತಿರುಗಿ ನಿಂತಿದ್ದ, ಡೊಡ್ಡ ಹರವೆ ಲಕ್ಷ್ಮಿ ಸ್ವಲ್ಪ ಬೆಚ್ಚಿದಳು. ಇನ್ನೂ ಕಂಜನ್‌, ಪ್ರಶಾಂತ, ಸುಗ್ರೀವ, ಹಾಗೂ ಹಿರಣ್ಯ ಆನೆ ಭೀಮನು ಧೈರ್ಯ ತುಂಬಿದ.

ಅಭ್ಯಾಸದ ಹಿನ್ನೆಲೆ…
ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು.

ಮೈಸೂರು ದಸರಾ ಆಕರ್ಷಣೆಯಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು. ಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

4 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

4 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

4 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

5 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago