ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು.
ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು.
ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಮಹೇಂದ್ರ, ಪ್ರಶಾಂತ, ಭೀಮ, ಧನಂಜಯ ಕದಲದೆ ಧೈರ್ಯ ತೋರಿದರೆ, ಪಕ್ಕದಲ್ಲಿದ್ದ ಕುಮ್ಕಿ ಆನೆ ಇನ್ನಿತರ ಕಿರಿಯ ಆನೆಗಳು ಆವುಗಳನು ತಾಗಿನಿಂತು ಧೈರ್ಯ ತಂದುಕೊಂಡವು.
ಕಿರಿಯ ಆನೆ ರೋಹಿತ್ ಹಿಂದೆ ತಿರುಗಿ ನಿಂತಿದ್ದ, ಡೊಡ್ಡ ಹರವೆ ಲಕ್ಷ್ಮಿ ಸ್ವಲ್ಪ ಬೆಚ್ಚಿದಳು. ಇನ್ನೂ ಕಂಜನ್, ಪ್ರಶಾಂತ, ಸುಗ್ರೀವ, ಹಾಗೂ ಹಿರಣ್ಯ ಆನೆ ಭೀಮನು ಧೈರ್ಯ ತುಂಬಿದ.
ಅಭ್ಯಾಸದ ಹಿನ್ನೆಲೆ…
ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು.
ಮೈಸೂರು ದಸರಾ ಆಕರ್ಷಣೆಯಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು. ಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…