ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು.
ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು.
ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಮಹೇಂದ್ರ, ಪ್ರಶಾಂತ, ಭೀಮ, ಧನಂಜಯ ಕದಲದೆ ಧೈರ್ಯ ತೋರಿದರೆ, ಪಕ್ಕದಲ್ಲಿದ್ದ ಕುಮ್ಕಿ ಆನೆ ಇನ್ನಿತರ ಕಿರಿಯ ಆನೆಗಳು ಆವುಗಳನು ತಾಗಿನಿಂತು ಧೈರ್ಯ ತಂದುಕೊಂಡವು.
ಕಿರಿಯ ಆನೆ ರೋಹಿತ್ ಹಿಂದೆ ತಿರುಗಿ ನಿಂತಿದ್ದ, ಡೊಡ್ಡ ಹರವೆ ಲಕ್ಷ್ಮಿ ಸ್ವಲ್ಪ ಬೆಚ್ಚಿದಳು. ಇನ್ನೂ ಕಂಜನ್, ಪ್ರಶಾಂತ, ಸುಗ್ರೀವ, ಹಾಗೂ ಹಿರಣ್ಯ ಆನೆ ಭೀಮನು ಧೈರ್ಯ ತುಂಬಿದ.
ಅಭ್ಯಾಸದ ಹಿನ್ನೆಲೆ…
ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು.
ಮೈಸೂರು ದಸರಾ ಆಕರ್ಷಣೆಯಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು. ಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…