ಮೈಸೂರು ನಗರ

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ

ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ ಕಿರು ಚಿತ್ರ ಸ್ಪರ್ಧೆಗೆ ಬಂತಂಹ 72 ಕಿರು ಚಿತ್ರಗಳನ್ನು ಚಲನ ಚಿತ್ರ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವವರು ಉತ್ತಮ ಕಿರು ಚಿತ್ರಗಳ ಆಯ್ಕೆ ಸಂಬಂಧ ಇಂದು ವೀಕ್ಷಿಸಿದರು.

ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ಕಿರು ಚಿತ್ರ ತಯಾರಿಕೆ ಸ್ಪರ್ಧೆ ಸೇರಿದಂತೆ ಹಲವು ವಿಶೇಷತೆಗಳನ್ನು ನೀಡಲು ಚಲನ ಚಿತ್ರೋತ್ಸವ ಉಪ ಸಮಿತಿ ಸಿದ್ಧತೆ ನಡೆಸಿದ್ದು ತೀರ್ಪುಗಾರರಿಂದ ಆಯ್ಕೆಯಾದ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಅತ್ಯುತ್ತಮ ಕಿರು ಚಿತ್ರಗಳನ್ನು ಐನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡಲಾಗುವುದು. ಕಿರುಚಿತ್ರಗಳ ಸ್ಪರ್ಧೆಗೆ 63 ಕನ್ನಡ ಭಾಷೆ, 2 ಮೂಕಿ ಚಿತ್ರ, 1 ಕೊಡವ, 1 ಹಿಂದಿ, 4 ತಮಿಳು ಹಾಗೂ 1 ಲಂಬಾಣಿ ಭಾಷೆಯ ಕಿರುಚಿತ್ರಗಳು ಬಂದಿರುತ್ತದೆ.

ಕಿರು ಚಿತ್ರ ಸ್ಪರ್ಧೆಗೆ ಬಂದಂತಹ ಕಿರು ಚಿತ್ರಗಳ ಆಯ್ಕೆ ಸಂಬಂಧ ತೀರ್ಪು ಗಾರರಾಗಿ ರಂಗಭೂಮಿ ಕಲಾವಿದರು ಹಾಗೂ ಚಲನಚಿತ್ರ ನಟರು, ಕಿರುತರೆ ನಟರಾದ ಶಿವಾಜಿ ರಾವ್ ಜಾಧವ್, ಹಿರಿಯ ಚಲನಚಿತ್ರ ಛಾಯಾಗ್ರಾಹಕರು ಹಾಗೂ ನಿರ್ದೇಶಕರಾದ ಜನಾರ್ಧನ್, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಸಪ್ನಾ. ಎಂ.ಎಸ್ ಹಾಗೂ
ಛಾಯಾಗ್ರಾಹಕರು ಮತ್ತು ನಟರಾದ ಕೆ.ಜೆ.ಪವನ್ ಅವರು ಭಾಗವಹಿಸಿದ್ದರು

ಸಂದರ್ಭದಲ್ಲಿ ‌ದಸರಾ ಚಲನಚಿತ್ರೋತ್ಸವ ಉಪ ವಿಶೇಷಾಧಿಕಾರಿ ಹಾಗೂ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ. ಕೆ.ಎನ್. ಬಸವರಾಜು, ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಹಾಗೂ ಸಮಿತಿಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಹರೀಶ್ ಟಿ.ಕೆ. ಹಾಗೂ ಚಲನ ಚಿತ್ರೋತ್ಸವದ ಸಹ ಸಂಯೋಜಕರಾದ ಶ್ರೇಯಸ್ ಮತ್ತು ಇತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago