ಮೈಸೂರು ನಗರ

ಮೈಸೂರು ಓನ್ ಕೇಂದ್ರಗಳಲ್ಲಿ ದಸರಾ ಚಲನಚಿತ್ರೋತ್ಸವದ ಪಾಸ್ ಲಭ್ಯ

ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಓನ್ ನಲ್ಲೂ ಲಭ್ಯ

ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಗ್ರಾಮಾಂತರ ಪ್ರದೇಶದಲ್ಲಿ ನಿನಿ ಪ್ರಿಯರಿಗೆ ಹಾಗೂ ಸಿನಿಮಾಸಕ್ತರಿಗೆ ಸುಲಭವಾಗಿ ಲಭ್ಯವಾಗುವಂತೆ
ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ಬಳಸಿ https://sevasindhuservices.karnataka.gov.in/directApply.do?serviceId=2310 ನೋಂದಣಿ ಮಾಡಿ ಪಾಸ್ ಬುಕಿಂಗ್ ಹಾಗೂ ಮಾಹಿತಿ ಪಡೆಯಬಹುದಾಗಿರುತ್ತದೆ.

ಕರ್ನಾಟಕದಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಮತ್ತು ನಗರ/ ಪಟ್ಟಣ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಹಾಗೂ ಮೈಸೂರು ಓನ್ ಕೇಂದ್ರದ ಸೇವಾ ಪೋರ್ಟಲ್ ನಲ್ಲಿ ಯಾವುದೇ ನೊಂದಣಿ ಮಾಡದೇ ಅಗತ್ಯ ಮಾಹಿತಿ ನೀಡಿ ಸಿನಿಮಾ ಪಾಸ್ ಗಳನ್ನು ಪಡೆಯಬಹುದಾಗಿರುತ್ತದೆ.

ಚಲನಚಿತ್ರೋತ್ಸವ ಪಾಸ್ ದರ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರೀಕರಿಗೆ 300 ರೂಗಳಾಗಿರುತ್ತದ್ದು ಇತರರಿಗೆ 500 ರೂಗಳು ಆಗಿರುತ್ತದೆ.

ನಗರದ ದಟ್ಟ ಜನಸಂದಣಿ ಸ್ಥಳಗಳಾದ ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟಾಂಡ್, ನಗರ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮೃಗಾಲಯದ ಎದುರಿನ ಪಾರ್ಕಿಂಗ್ ಆವರಣ, ಬಯಲು ರಂಗಮಂದಿರದ ಯುವ ಸಂಭ್ರಮದ ವೇದಿಕೆಯ ಆವರಣದಲ್ಲಿ ಪಾಸ್ ಪಡೆಯಲು ಅನುಕೂಲವಾಗುವಂತೆ kiosk ಗಳನ್ನು ಸಹಾ ಸ್ಥಾಪಿಸಲಾಗುತ್ತಿದೆ ಎಂದು ಚಲನಚಿತ್ರೋತ್ಸವ ಉಪ ಸಮಿತಿಯ ಉಪ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

52 ಕೇಂದ್ರಗಳಲ್ಲೂ ಪಾಸ್‌ ಲಭ್ಯ

ಮೈಸೂರು ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ 346 ಗ್ರಾಮ ಓನ್ ಕೇಂದ್ರಗಳು, ನಗರ ಹಾಗೂ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ 52 ಕರ್ನಾಟಕ ಓನ್ ಕೇಂದ್ರಗಳಲ್ಲಿಯೂ ಸಿನಿಮಾ ಪಾಸ್ ಗಳು ಸಿನಿಮಾಸ್ತರಿಗೆ ಲಭ್ಯವಿರುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago