ಮೈಸೂರು ನಗರ

ಮೈಸೂರು ಓನ್ ಕೇಂದ್ರಗಳಲ್ಲಿ ದಸರಾ ಚಲನಚಿತ್ರೋತ್ಸವದ ಪಾಸ್ ಲಭ್ಯ

ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಓನ್ ನಲ್ಲೂ ಲಭ್ಯ

ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಗ್ರಾಮಾಂತರ ಪ್ರದೇಶದಲ್ಲಿ ನಿನಿ ಪ್ರಿಯರಿಗೆ ಹಾಗೂ ಸಿನಿಮಾಸಕ್ತರಿಗೆ ಸುಲಭವಾಗಿ ಲಭ್ಯವಾಗುವಂತೆ
ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ಬಳಸಿ https://sevasindhuservices.karnataka.gov.in/directApply.do?serviceId=2310 ನೋಂದಣಿ ಮಾಡಿ ಪಾಸ್ ಬುಕಿಂಗ್ ಹಾಗೂ ಮಾಹಿತಿ ಪಡೆಯಬಹುದಾಗಿರುತ್ತದೆ.

ಕರ್ನಾಟಕದಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಮತ್ತು ನಗರ/ ಪಟ್ಟಣ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಹಾಗೂ ಮೈಸೂರು ಓನ್ ಕೇಂದ್ರದ ಸೇವಾ ಪೋರ್ಟಲ್ ನಲ್ಲಿ ಯಾವುದೇ ನೊಂದಣಿ ಮಾಡದೇ ಅಗತ್ಯ ಮಾಹಿತಿ ನೀಡಿ ಸಿನಿಮಾ ಪಾಸ್ ಗಳನ್ನು ಪಡೆಯಬಹುದಾಗಿರುತ್ತದೆ.

ಚಲನಚಿತ್ರೋತ್ಸವ ಪಾಸ್ ದರ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರೀಕರಿಗೆ 300 ರೂಗಳಾಗಿರುತ್ತದ್ದು ಇತರರಿಗೆ 500 ರೂಗಳು ಆಗಿರುತ್ತದೆ.

ನಗರದ ದಟ್ಟ ಜನಸಂದಣಿ ಸ್ಥಳಗಳಾದ ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟಾಂಡ್, ನಗರ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮೃಗಾಲಯದ ಎದುರಿನ ಪಾರ್ಕಿಂಗ್ ಆವರಣ, ಬಯಲು ರಂಗಮಂದಿರದ ಯುವ ಸಂಭ್ರಮದ ವೇದಿಕೆಯ ಆವರಣದಲ್ಲಿ ಪಾಸ್ ಪಡೆಯಲು ಅನುಕೂಲವಾಗುವಂತೆ kiosk ಗಳನ್ನು ಸಹಾ ಸ್ಥಾಪಿಸಲಾಗುತ್ತಿದೆ ಎಂದು ಚಲನಚಿತ್ರೋತ್ಸವ ಉಪ ಸಮಿತಿಯ ಉಪ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

52 ಕೇಂದ್ರಗಳಲ್ಲೂ ಪಾಸ್‌ ಲಭ್ಯ

ಮೈಸೂರು ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ 346 ಗ್ರಾಮ ಓನ್ ಕೇಂದ್ರಗಳು, ನಗರ ಹಾಗೂ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ 52 ಕರ್ನಾಟಕ ಓನ್ ಕೇಂದ್ರಗಳಲ್ಲಿಯೂ ಸಿನಿಮಾ ಪಾಸ್ ಗಳು ಸಿನಿಮಾಸ್ತರಿಗೆ ಲಭ್ಯವಿರುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 mins ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

19 mins ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

24 mins ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

26 mins ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

30 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

6 hours ago