ಮೈಸೂರು: ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ ಕಛೇರಿ, ಆಸ್ಪತ್ರೆ, ಅಪಾರ್ಟ್ ಮೆಂಟ್, ಹೋಟೆಲ್ ಕೈ ತೋಟಗಳು ಸೇರಿದಂತೆ ಇತರೆ ಕೈ ತೋಟಗಳ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ಜನ್ ಪಾರ್ಕ್ ಆವರಣದಲ್ಲಿರುವ ಜಿಲ್ಲಾ ತೋಟಗಾರಿಕೆ ಸಂಘದ ಕಛೇರಿಯಲ್ಲಿ ಸೆಪ್ಟೆಂಬರ್ 02 ರಿಂದ 20 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕವನ್ನು ಗೂಗಲ್ ಪೇ/ಫೋನ್ ಪೇ/ಚೆಕ್/ಡಿಡಿ/ ಅಥವಾ ಇನ್ಯಾವುದೇ ರೀತಿಯ ಇ-ಪೇಮೆಂಟ್ ಮೋಡ್ ಮೂಲಕ ಮಾತ್ರ ಶುಲ್ಕ ಪಾವತಿಸಿ ತೋಟಗಳ ಸ್ಪರ್ಧೆಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.
ಸೆಪ್ಟೆಂಬರ್ 25 ರಿಂದ 27 ರವರೆಗೆ ತೀರ್ಪುಗಾರರು ಸಂಘದ ಕಛೇರಿಯಲ್ಲಿ ನೋಂದಾಯಿಸಿಕೊಂಡ ತೋಟಗಳಿಗೆ ಭೇಟಿ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2977572 ನ್ನು ಸಂಪರ್ಕಿಸಬಹುದು ಎಂದು ಕರ್ಜನ್ ಪಾರ್ಕ್ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ತೋಟಗಾರಿಕಾ ಸಂಘದ ಪದನಿಮಿತ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…