ಮೈಸೂರು: ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ ಕಛೇರಿ, ಆಸ್ಪತ್ರೆ, ಅಪಾರ್ಟ್ ಮೆಂಟ್, ಹೋಟೆಲ್ ಕೈ ತೋಟಗಳು ಸೇರಿದಂತೆ ಇತರೆ ಕೈ ತೋಟಗಳ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ಜನ್ ಪಾರ್ಕ್ ಆವರಣದಲ್ಲಿರುವ ಜಿಲ್ಲಾ ತೋಟಗಾರಿಕೆ ಸಂಘದ ಕಛೇರಿಯಲ್ಲಿ ಸೆಪ್ಟೆಂಬರ್ 02 ರಿಂದ 20 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕವನ್ನು ಗೂಗಲ್ ಪೇ/ಫೋನ್ ಪೇ/ಚೆಕ್/ಡಿಡಿ/ ಅಥವಾ ಇನ್ಯಾವುದೇ ರೀತಿಯ ಇ-ಪೇಮೆಂಟ್ ಮೋಡ್ ಮೂಲಕ ಮಾತ್ರ ಶುಲ್ಕ ಪಾವತಿಸಿ ತೋಟಗಳ ಸ್ಪರ್ಧೆಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.
ಸೆಪ್ಟೆಂಬರ್ 25 ರಿಂದ 27 ರವರೆಗೆ ತೀರ್ಪುಗಾರರು ಸಂಘದ ಕಛೇರಿಯಲ್ಲಿ ನೋಂದಾಯಿಸಿಕೊಂಡ ತೋಟಗಳಿಗೆ ಭೇಟಿ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2977572 ನ್ನು ಸಂಪರ್ಕಿಸಬಹುದು ಎಂದು ಕರ್ಜನ್ ಪಾರ್ಕ್ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ತೋಟಗಾರಿಕಾ ಸಂಘದ ಪದನಿಮಿತ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…