ಮೈಸೂರು: ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ ಕಛೇರಿ, ಆಸ್ಪತ್ರೆ, ಅಪಾರ್ಟ್ ಮೆಂಟ್, ಹೋಟೆಲ್ ಕೈ ತೋಟಗಳು ಸೇರಿದಂತೆ ಇತರೆ ಕೈ ತೋಟಗಳ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ಜನ್ ಪಾರ್ಕ್ ಆವರಣದಲ್ಲಿರುವ ಜಿಲ್ಲಾ ತೋಟಗಾರಿಕೆ ಸಂಘದ ಕಛೇರಿಯಲ್ಲಿ ಸೆಪ್ಟೆಂಬರ್ 02 ರಿಂದ 20 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕವನ್ನು ಗೂಗಲ್ ಪೇ/ಫೋನ್ ಪೇ/ಚೆಕ್/ಡಿಡಿ/ ಅಥವಾ ಇನ್ಯಾವುದೇ ರೀತಿಯ ಇ-ಪೇಮೆಂಟ್ ಮೋಡ್ ಮೂಲಕ ಮಾತ್ರ ಶುಲ್ಕ ಪಾವತಿಸಿ ತೋಟಗಳ ಸ್ಪರ್ಧೆಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.
ಸೆಪ್ಟೆಂಬರ್ 25 ರಿಂದ 27 ರವರೆಗೆ ತೀರ್ಪುಗಾರರು ಸಂಘದ ಕಛೇರಿಯಲ್ಲಿ ನೋಂದಾಯಿಸಿಕೊಂಡ ತೋಟಗಳಿಗೆ ಭೇಟಿ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2977572 ನ್ನು ಸಂಪರ್ಕಿಸಬಹುದು ಎಂದು ಕರ್ಜನ್ ಪಾರ್ಕ್ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ತೋಟಗಾರಿಕಾ ಸಂಘದ ಪದನಿಮಿತ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…