ಮೈಸೂರು: ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ ಕಛೇರಿ, ಆಸ್ಪತ್ರೆ, ಅಪಾರ್ಟ್ ಮೆಂಟ್, ಹೋಟೆಲ್ ಕೈ ತೋಟಗಳು ಸೇರಿದಂತೆ ಇತರೆ ಕೈ ತೋಟಗಳ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ಜನ್ ಪಾರ್ಕ್ ಆವರಣದಲ್ಲಿರುವ ಜಿಲ್ಲಾ ತೋಟಗಾರಿಕೆ ಸಂಘದ ಕಛೇರಿಯಲ್ಲಿ ಸೆಪ್ಟೆಂಬರ್ 02 ರಿಂದ 20 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕವನ್ನು ಗೂಗಲ್ ಪೇ/ಫೋನ್ ಪೇ/ಚೆಕ್/ಡಿಡಿ/ ಅಥವಾ ಇನ್ಯಾವುದೇ ರೀತಿಯ ಇ-ಪೇಮೆಂಟ್ ಮೋಡ್ ಮೂಲಕ ಮಾತ್ರ ಶುಲ್ಕ ಪಾವತಿಸಿ ತೋಟಗಳ ಸ್ಪರ್ಧೆಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.
ಸೆಪ್ಟೆಂಬರ್ 25 ರಿಂದ 27 ರವರೆಗೆ ತೀರ್ಪುಗಾರರು ಸಂಘದ ಕಛೇರಿಯಲ್ಲಿ ನೋಂದಾಯಿಸಿಕೊಂಡ ತೋಟಗಳಿಗೆ ಭೇಟಿ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2977572 ನ್ನು ಸಂಪರ್ಕಿಸಬಹುದು ಎಂದು ಕರ್ಜನ್ ಪಾರ್ಕ್ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ತೋಟಗಾರಿಕಾ ಸಂಘದ ಪದನಿಮಿತ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…