ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು.
ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಭತ್ತು ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು.
ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಮ್ ಅಂಡ್ ಕೊ. ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ನಡೆದ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯು- 5,360 ಕೆ ಜಿ, ಧನಂಜಯ- 5,310 ಕೆ ಜಿ, ಕಾವೇರಿ- 3,010 ಕೆ ಜಿ, ಲಕ್ಷ್ಮಿ- 3,730 ಕೆ ಜಿ, ಭೀಮ- 5,465 ಕೆ ಜಿ, ಏಕಲವ್ಯ- 5,305 ಕೆ ಜಿ, ಮಹೇಂದ್ರ- 5,120 ಕೆ ಜಿ , ಕಂಜನ್- 4,880 ಕೆ ಜಿ ಹಾಗೂ ಪ್ರಶಾಂತ- 5,110 ಕೆ ಜಿ ತೂಕ ಹೊಂದಿದ್ದಾನೆ.
ತೂಕ ಪರೀಕ್ಷೆಯಲ್ಲಿ ಭೀಮ ಆನೆಯು ಕ್ಯಾಪ್ಟನ್ ಅಭಿಮನ್ಯುವನ್ನೇ ಹಿಂದಿಕ್ಕಿ ಅತ್ಯಂತ ಹೆಚ್ಚಿನ ಬಲಶಾಲಿ ಎಂದು ಸಾಬೀತು ಮಾಡಿದ್ದಾನೆ.
ತೂಕ ಪರಿಶೀಲನೆ ನಂತರ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ನೀಡಿ ತಯಾರಿ ನಡೆಸಲಾಗುತ್ತದೆ. ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗಾಗಿ ತಾಲೀಮು ನಡೆಸಲು ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತದೆ.
ಬೆಳಿಗ್ಗೆ ಮತ್ತು ಸಂಜೆ ಎರಡು ಸಮಯ ಅರಮನೆಯಿಂದ ಬನ್ನಿಮಂಟಪದವರೆಗೆ ನಿತ್ಯ ತಾಲೀಮು ನಡೆಸಲಾಗುತ್ತದೆ. ನಗರದ ಸದ್ದುಗದ್ದಲಕ್ಕೆ ವಿಚಲಿತವಾಗದಂತೆ ಆನೆಗಳಿಗೆ ತರಬೇತಿ ನೀಡಲು ಮಾವುತರು ಹಾಗೂ ಕಾವಾಡಿಗರು ಸಿದ್ದರಾಗಿದ್ದಾರೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…