ಮೈಸೂರು ನಗರ

ಮುಡಾ ಮುಖಾಂತರವೇ ಇ-ಖಾತೆಗೆ ಒತ್ತಾಯ: ಸುಧಾಕರ್‌ ಎಸ್‌ ಶೆಟ್ಟಿ

ಮೈಸೂರು: ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ಮೈಸೂರು ಚೇಂಬರ್‌ ಆಫ್‌ ಕಾಮರ್ಸ್‌ ಮಾಜಿ ಅಧ್ಯಕ್ಷ ಸುಧಾಕರ್‌ ಎಸ್‌ ಶೆಟ್ಟಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಧಾಕರ್‌ ಶೆಟ್ಟಿ ಅವರು, ಮುಡಾ, ತನ್ನ ಅಡಿಯಲ್ಲಿದ್ದ ಎಲ್ಲಾ ಖಾಸಗಿ ಲೇಔಟ್‌ಗಳ ನಿವೇಶನಗಳ ಇ-ಖಾತೆ ಮಾಡಿಸಲು ಬೇರೆ ಬೇರ ಪಂಚಾಯಿತಿಗಳಿಗೆ ದಾಖಲೆಗಳನ್ನು ಕಳಿಸಿಕೊಟ್ಟಿದೆ. ಅಲ್ಲಿನ ಸ್ಥಳೀಯ ಪಂಚಾಯಿತಿ ಸದಸ್ಯರುಗಳು ಇದನ್ನು ತಮ್ಮ ಸ್ವಂತ ಆದಾಯದ ಮೂಲವನ್ನಾಗಿ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ. ಇ-ಖಾತೆಯಿಂದ ಮುಡಾಗೆ ಹೋಗುತ್ತಿದ್ದ ಟ್ಯಾಕ್ಸ್‌ ಈಗ ಸ್ಥಳಿಯ ಪಂಚಾಯಿತಿಗಳಿಗೆ ಹೋಗಲಿದೆ ಎಂದು ಹೇಳಿದ್ದಾರೆ.

ಇ-ಖಾತೆ ನಂಬಿ ಬ್ಯಾಂಕ್‌ ಲೋನ್‌ ಅಥವಾ ಕಟ್ಟಡ ಕಟ್ಟುವುದಕ್ಕೆ ಹೋಗುವ ಲಕ್ಷಾಂತರ ನಿವೇಶನದಾರರಿಗೆ ಇ-ಖಾತೆ ಸಿಗಲು ತೊಂದರೆಯಾಗಲಿದೆ. ಪಂಚಾಯಿತಿ ಸದಸ್ಯರು ಕೇಳುವಷ್ಟು ಹಣ ಕೊಟ್ಟು ಇ-ಖಾತೆ ಮಾಡಿಸುವ ಪರಿಣಾಮ ಎದುರಾಗಿದೆ. ಆದ್ದರಿಂದ ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

37 mins ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

55 mins ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

1 hour ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

1 hour ago

ಗಣರಾಜ್ಯೋತ್ಸವ | ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

2 hours ago

ಮೈಸೂರು | ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ : ಸಂವಿಧಾನ ರಕ್ಷಿಸಲು ಕರೆ

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…

2 hours ago