ಮೈಸೂರು: ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ಮೈಸೂರು ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಧಾಕರ್ ಶೆಟ್ಟಿ ಅವರು, ಮುಡಾ, ತನ್ನ ಅಡಿಯಲ್ಲಿದ್ದ ಎಲ್ಲಾ ಖಾಸಗಿ ಲೇಔಟ್ಗಳ ನಿವೇಶನಗಳ ಇ-ಖಾತೆ ಮಾಡಿಸಲು ಬೇರೆ ಬೇರ ಪಂಚಾಯಿತಿಗಳಿಗೆ ದಾಖಲೆಗಳನ್ನು ಕಳಿಸಿಕೊಟ್ಟಿದೆ. ಅಲ್ಲಿನ ಸ್ಥಳೀಯ ಪಂಚಾಯಿತಿ ಸದಸ್ಯರುಗಳು ಇದನ್ನು ತಮ್ಮ ಸ್ವಂತ ಆದಾಯದ ಮೂಲವನ್ನಾಗಿ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ. ಇ-ಖಾತೆಯಿಂದ ಮುಡಾಗೆ ಹೋಗುತ್ತಿದ್ದ ಟ್ಯಾಕ್ಸ್ ಈಗ ಸ್ಥಳಿಯ ಪಂಚಾಯಿತಿಗಳಿಗೆ ಹೋಗಲಿದೆ ಎಂದು ಹೇಳಿದ್ದಾರೆ.
ಇ-ಖಾತೆ ನಂಬಿ ಬ್ಯಾಂಕ್ ಲೋನ್ ಅಥವಾ ಕಟ್ಟಡ ಕಟ್ಟುವುದಕ್ಕೆ ಹೋಗುವ ಲಕ್ಷಾಂತರ ನಿವೇಶನದಾರರಿಗೆ ಇ-ಖಾತೆ ಸಿಗಲು ತೊಂದರೆಯಾಗಲಿದೆ. ಪಂಚಾಯಿತಿ ಸದಸ್ಯರು ಕೇಳುವಷ್ಟು ಹಣ ಕೊಟ್ಟು ಇ-ಖಾತೆ ಮಾಡಿಸುವ ಪರಿಣಾಮ ಎದುರಾಗಿದೆ. ಆದ್ದರಿಂದ ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…