ಮೈಸೂರು: ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ಮೈಸೂರು ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಧಾಕರ್ ಶೆಟ್ಟಿ ಅವರು, ಮುಡಾ, ತನ್ನ ಅಡಿಯಲ್ಲಿದ್ದ ಎಲ್ಲಾ ಖಾಸಗಿ ಲೇಔಟ್ಗಳ ನಿವೇಶನಗಳ ಇ-ಖಾತೆ ಮಾಡಿಸಲು ಬೇರೆ ಬೇರ ಪಂಚಾಯಿತಿಗಳಿಗೆ ದಾಖಲೆಗಳನ್ನು ಕಳಿಸಿಕೊಟ್ಟಿದೆ. ಅಲ್ಲಿನ ಸ್ಥಳೀಯ ಪಂಚಾಯಿತಿ ಸದಸ್ಯರುಗಳು ಇದನ್ನು ತಮ್ಮ ಸ್ವಂತ ಆದಾಯದ ಮೂಲವನ್ನಾಗಿ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ. ಇ-ಖಾತೆಯಿಂದ ಮುಡಾಗೆ ಹೋಗುತ್ತಿದ್ದ ಟ್ಯಾಕ್ಸ್ ಈಗ ಸ್ಥಳಿಯ ಪಂಚಾಯಿತಿಗಳಿಗೆ ಹೋಗಲಿದೆ ಎಂದು ಹೇಳಿದ್ದಾರೆ.
ಇ-ಖಾತೆ ನಂಬಿ ಬ್ಯಾಂಕ್ ಲೋನ್ ಅಥವಾ ಕಟ್ಟಡ ಕಟ್ಟುವುದಕ್ಕೆ ಹೋಗುವ ಲಕ್ಷಾಂತರ ನಿವೇಶನದಾರರಿಗೆ ಇ-ಖಾತೆ ಸಿಗಲು ತೊಂದರೆಯಾಗಲಿದೆ. ಪಂಚಾಯಿತಿ ಸದಸ್ಯರು ಕೇಳುವಷ್ಟು ಹಣ ಕೊಟ್ಟು ಇ-ಖಾತೆ ಮಾಡಿಸುವ ಪರಿಣಾಮ ಎದುರಾಗಿದೆ. ಆದ್ದರಿಂದ ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…