ಮೈಸೂರು: ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ಮೈಸೂರು ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಧಾಕರ್ ಶೆಟ್ಟಿ ಅವರು, ಮುಡಾ, ತನ್ನ ಅಡಿಯಲ್ಲಿದ್ದ ಎಲ್ಲಾ ಖಾಸಗಿ ಲೇಔಟ್ಗಳ ನಿವೇಶನಗಳ ಇ-ಖಾತೆ ಮಾಡಿಸಲು ಬೇರೆ ಬೇರ ಪಂಚಾಯಿತಿಗಳಿಗೆ ದಾಖಲೆಗಳನ್ನು ಕಳಿಸಿಕೊಟ್ಟಿದೆ. ಅಲ್ಲಿನ ಸ್ಥಳೀಯ ಪಂಚಾಯಿತಿ ಸದಸ್ಯರುಗಳು ಇದನ್ನು ತಮ್ಮ ಸ್ವಂತ ಆದಾಯದ ಮೂಲವನ್ನಾಗಿ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ. ಇ-ಖಾತೆಯಿಂದ ಮುಡಾಗೆ ಹೋಗುತ್ತಿದ್ದ ಟ್ಯಾಕ್ಸ್ ಈಗ ಸ್ಥಳಿಯ ಪಂಚಾಯಿತಿಗಳಿಗೆ ಹೋಗಲಿದೆ ಎಂದು ಹೇಳಿದ್ದಾರೆ.
ಇ-ಖಾತೆ ನಂಬಿ ಬ್ಯಾಂಕ್ ಲೋನ್ ಅಥವಾ ಕಟ್ಟಡ ಕಟ್ಟುವುದಕ್ಕೆ ಹೋಗುವ ಲಕ್ಷಾಂತರ ನಿವೇಶನದಾರರಿಗೆ ಇ-ಖಾತೆ ಸಿಗಲು ತೊಂದರೆಯಾಗಲಿದೆ. ಪಂಚಾಯಿತಿ ಸದಸ್ಯರು ಕೇಳುವಷ್ಟು ಹಣ ಕೊಟ್ಟು ಇ-ಖಾತೆ ಮಾಡಿಸುವ ಪರಿಣಾಮ ಎದುರಾಗಿದೆ. ಆದ್ದರಿಂದ ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…