ಮೈಸೂರು: ಬಿಜೆಪಿ ಹಾಗೂ ಆರ್ಎಸ್ಎಸ್ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಈ ಕುರಿತು ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಕೊಡುವ ಅವಶ್ಯಕತೆ ಏನಿತ್ತು? ವಿಚಾರಣೆ ಹಂತದಲ್ಲಿ ಇರುವಾಗಲೇ ಪತ್ರಿಕಾ ಪ್ರಕಟಣೆ ಕೊಡುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿದರು.
ಸಿಎಂ ಪತ್ನಿ ಪಡೆದ ಸೈಟನ್ನು ಈಗಾಗಲೇ ಮುಡಾಗೆ ವಾಪಸ್ ನೀಡಲಾಗಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಹೆಸರು ಹೇಳೋದು ಸರಿಯಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಡಿಗೆ ತಾಕತ್ತಿದ್ದರೆ ಜಪ್ತಿ ಮಾಡಿದ್ದೇವೆ ಎಂದು ಹೇಳುವ 142 ಸೈಟ್ ಪಟ್ಟಿ ಬಿಡುಗಡೆ ಮಾಡಲಿ. ಇಡಿ ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…